ಬಂಟ್ವಾಳ: ಅಯೋಧ್ಯಾನಗರ ಪೆರ್ನೆಯ ಶ್ರೀ ರಾಮಚಂದ್ರ ಪದವಿ ಪೂರ್ವ ವಿದ್ಯಾಲಯದಲ್ಲಿ ಒಳಾಂಗಣ ಕ್ರೀಡಾಂಗಣದ ಉದ್ಘಾಟನಾ ಕಾರ್ಯಕ್ರಮ ಮತ್ತು
ಹೊನಲು ಬೆಳಕಿನ ವಾಲಿಬಾಲ್ ಮತ್ತು 58 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ ಏಪ್ರಿಲ್ 26 ರಂದು ನಡೆಯಲಿದೆ.
ಬೆಳಗ್ಗೆ 9.30 ಕ್ಕೆ ಕ್ರೀಡಾಂಗಣವನ್ನು ಕರ್ನಾಟಕ ಸರಕಾರದ ಸಭಾಧ್ಯಕ್ಷರಾದ ಯುಟಿ ಖಾದರ್ ಫರೀದ್ ರವರು ಉದ್ಘಾಟಿಸಲಿದ್ದಾರೆ. ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ದೀಪ ಪ್ರಜ್ವಲನೆ ಮಾಡಲಿದ್ದು ವಿಧಾನ ಪರಿಷತ್ ಶಾಸಕ ಎಸ್ ಎಲ್ ಬೋಜೇಗೌಡ, ಎಂ ಆರ್ ಪಿ ಎಲ್ ನ ಜಿಎಂ ಕೃಷ್ಣ ಹೆಗ್ಡೆ ಮಿಯಾರ್, ಪದವಿ ಪೂರ್ವ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಎಚ್ ಜಿ, ಗೋವಿಂದ ಮಡಿವಾಳ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಜಯ ಉಪಸ್ಥಿತರಿರಲಿದ್ದಾರೆ.
ಸಂಜೆ 6 ಗಂಟೆಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ಮತ್ತು 58 ಕೆ ಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ ಹಾಗೂ ಹಿರಿಯ ಚಿತ್ರಕಲಾ ಶಿಕ್ಷಕರಾದ ಶ್ರೀ ಚೆನ್ನಕೇಶವ ಡಿ ಆರ್ ರವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.