ಇತ್ತೀಚೆಗೆ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಇನ್ಸ್ಟಾಗ್ರಾಂ ಫೇಜ್ ಅನ್ನು ನಿಷ್ಕ್ರಿಯಗೊಳಿಸಲಾಗಿದೆ.
beary_royal_nawab’ ಧಾರ್ಮಿಕ ಮತ್ತು ಸಮುದಾಯ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ವಿಷಯವನ್ನು ಪೋಸ್ಟ್ ಮಾಡುತ್ತಿತ್ತು. ಈ ಪೋಸ್ಟ್ಗಳು ದ್ವೇಷವನ್ನು ಉತ್ತೇಜಿಸುತ್ತಿದ್ದವು ಮತ್ತು ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಮೂರು ಪ್ರಕರಣಗಳು ದಾಖಲಾಗಿವೆ.
ಈ ಪೇಜ್ ನ ಬಗ್ಗೆ ಮಾಹಿತಿ ನೀಡುವಂತೆ, ಸಂಬಂಧಪಟ್ಟ Law Enforcement Agency ರವರಿಗೆ ಪತ್ರ ವ್ಯವಹಾರ ನಡೆಸಲಾಗಿತ್ತು. ಅದರಂತೆ ಸಂಬಂಧಪಟ್ಟ Law Enforcement Agency ರವರು ‘beary_royal_nawab’ ಎಂಬ ಇನ್ ಸ್ಟಾ ಗ್ರಾಂ ಫೇಜ್ ನ್ನು ಭಾರತ ದೇಶದಲ್ಲಿ ಕಾರ್ಯ ನಿರ್ವಹಿಸದಂತೆ ರದ್ದುಗೊಳಿಸಿರುತ್ತಾರೆ.