ಪುತ್ತೂರು : ಕೋವಿಡ್ ಸರಪಳಿಯನ್ನು ತುಂಡರಿಸುವ ಸಲುವಾಗಿ ಸರಕಾರ ಹಾಗೂ ಜಿಲ್ಲಾಡಳಿತದ ವಿಧಿಸಿದ್ದ ಕೋವಿಡ್ ನಿಯಮಾವಳಿ ಉಲ್ಲಂಘಿಸಿ ಮುಂಡೂರು ಗ್ರಾ.ಪಂ.ವ್ಯಾಪ್ತಿಯ ಸರ್ವೆ ಕಲ್ಪನೆ ಶಾಲಾ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಸಂಪ್ಯ ಪೊಲೀಸರು ದಾಳಿ ನಡೆಸಿ ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.
ಕ್ರಿಕೆಟ್ ಆಟವಾಡುವ ಸಂದರ್ಭದಲ್ಲಿ ದಾಳಿ ನಡೆಸಿದ ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ 8 ಬೈಕ್ ಗಳನ್ನು ಸೀಜ್ ಮಾಡಿದ್ದಾರೆ ಎನ್ನಲಾಗಿದೆ.
 
	    	






























