ಬೆಳ್ತಂಗಡಿ : ನಾಯಿ ಅಡ್ಡ ಬಂದ ಕಾರಣ ನಿಯಂತ್ರಣ ತಪ್ಪಿದ
ಬೊಲೆರೋ ಕಾರು ಪಲ್ಟಿಯಾಗಿ ಚರಂಡಿಗೆ ಬಿದ್ದು ಸಿಲುಕಿದ ಘಟನೆ ಚಾರ್ಮಾಡಿ ಗ್ರಾಮದ ಬೀಟಿಗೆಯ ಹೆದ್ದಾರಿಯಲ್ಲಿ ಜೂ.8 ರಂದು ರಾತ್ರಿ ನಡೆದಿದೆ.
ಮೂಡಿಗೆರೆ ನಿವಾಸಿಗಳಾದ ಚೇತನ್ ಮತ್ತು ಸುರೇಶ್ ಇಬ್ಬರು ಉಡುಪಿ ಜಿಲ್ಲೆಯ ಕಾರ್ಕಳದ ಸಂಬಂಧಿಗಳ ಮನೆಗೆ ಹೋಗಿ ವಾಪಸ್ಸಾಗುವ ಸಂದರ್ಭ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಹೆದ್ದಾರಿಯಲ್ಲಿ ನಾಯಿ ಅಡ್ಡ ಬಂದ ಕಾರಣದಿಂದ ನಿಯಂತ್ರಣ ತಪ್ಪಿದ ಬೊಲೆರೋ ವಾಹನ ಪಲ್ಟಿಯಾಗಿ ರಸ್ತೆಯ ಬದಿಯ ಕ್ರಾಂಕ್ರಿಟ್ ಚರಂಡಿಗೆ ಬಿದ್ದು ಸಿಲುಕಿಕೊಂಡಿದೆ.
ವಾಹನ ಪಲ್ಟಿ ರಭಸಕ್ಕೆ ವಾಹನದಲ್ಲಿದ್ದ ಚೇತನ್ ಮತ್ತು ಸುರೇಶ್ ಗೆ ಯಾವುದೇ ಹಾನಿಯಾಗಿಲ್ಲ.
ಸ್ಥಳೀಯರು ಬೊಲೆರೋ ವಾಹನವನ್ನು ಹೊರತೆಗೆಯಲು ಸಹಕರಿಸಿದರು.