ಸೋಣಂಗೇರಿ ಸಮೀಪದ ಆರ್ತಾಜೆ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ವೈದ್ಯರ ಕಾಲಿಗೆ ಗಂಭೀರ ಗಾಯವಾದ ಘಟನೆ ಇದೀಗ ವರದಿಯಾಗಿದೆ.
ಗಾಯಗೊಂಡ ಕಲ್ಲುಗುಂಡಿ ನಿವಾಸಿ ಡಾ. ಸಮಂತ್ ಎಂದು ತಿಳಿದು ಬಂದಿದ್ದು ಸ್ಥಳೀಯರು ಅವರನ್ನು ಕೂಡಲೇ ಕೆವಿಜಿ ಆಸ್ಪತ್ರೆಗೆ ಕೆರೆದೊಯ್ದಿದ್ದಾರೆ.
ಘಟನೆ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಕಣಿಗೆ ಬಿದ್ದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.