ಪುತ್ತೂರು : ಪಡ್ನೂರು ಗ್ರಾಮದ ನಿವಾಸಿ ಸಾಮಾಜಿಕ ಕಾರ್ಯಕರ್ತ ಸುದರ್ಶನ ಗೌಡ ಪುತ್ತೂರು ಅವರ ಮೇಲೆ ಹಲ್ಲೆ ಯತ್ನ ನಡೆದಿರುವುದಾಗಿ ಆರೋಪಿಸಿ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುದರ್ಶನ ನೀಡಿದ ದೂರಿನ ಅನ್ವಯ, ಜೂ.27 ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ಪಂಚಾಯತ್ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಭಿಯಂತರರು, ಪಂಚಾಯತ್ ಜನ ಪ್ರತಿನಿಧಿಗಳು ಪಂಚಾಯತ್ ರಸ್ತೆ ಅಳತೆಗೆ ಬಂದಿದ್ದಾಗ ಕೊಡಂಗೆ ನಿವಾಸಿ ನಿತೇಶ್ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಒಡ್ಡಿದ್ದಾನೆ. ಕೆಲವೇ ದಿನಗಳಲ್ಲಿ ಕಾರು ಹತ್ತಿಸಿ ಕೊಲೆಗೈಯುವ ಬೆದರಿಕೆ ಒಡ್ಡಿದ್ದಾನೆ ಎನ್ನಲಾಗಿದೆ.
ಪುತ್ತೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನಾಗಿದ್ದು ನನ್ನ ಮೇಲೆ ಹಲ್ಲೆ ನಡೆಸುವ ಸಾಧ್ಯತೆ ಇರುವುದರಿಂದ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.