ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ನ ಬೇಲ್ ಅರ್ಜಿಯ ವಿಚಾರಣೆ ನಡೆಸಿರುವ ದ.ಕ.ಆರನೇ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದೆ.
ಜು.19 ರಂದು ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಜು. 25 ರಂದು ತೀರ್ಪು ನೀಡುವುದಾಗಿ ಪ್ರಕಟಿಸಿದ್ದರು. 6ನೇ ಜಿಲ್ಲಾ ನ್ಯಾಯಾಲಯದಲ್ಲಿ ಶುಕ್ರವಾರ ಜಾಮೀನು ಅರ್ಜಿ ತಿರಸ್ಕೃತ ಗೊಳಿಸಲಾಗಿದೆ.