ಬಡಗನ್ನೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಿರ್ಮಾಣವಾಗಲಿರುವ ಯಾತ್ರಿ ನಿವಾಸದ ಶಿಲಾನ್ಯಾಸ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಂಗಳೂರು ಓಷ್ಯನ್ ಪರ್ಲ್ನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವಿಶೇಷ ಕಾರ್ಯಕ್ರಮದಲ್ಲಿ ಸೋಲೂರು ಆರ್ಯ ಈಡಿಗ ಸಂಸ್ಥಾನದ ಗುರುಗಳಾದ ಶ್ರೀ ವಿಖ್ಯಾತನಂದ ಸ್ವಾಮೀಜಿ, ಶಿವಗಿರಿ ಮಠದ ಶ್ರೀ ಜ್ಞಾನತೀರ್ಥ ಸ್ವಾಮೀಜಿ ಹಾಗೂ ಶ್ರೀ ಸತ್ಯಾನಂದ ಸ್ವಾಮಿರವರ ಉಪಸ್ಥಿತಿಯಲ್ಲಿ ಬಿಡುಗಡೆ ಗೊಳಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಜೆ ಸಮಿತಿಯ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಂಜೀವ ಪೂಜಾರಿ ಬಿರ್ವ ಸೆಂಟರ್, ಪ್ರಧಾನ ಕಾರ್ಯದರ್ಶಿ ಡಾ| ರಾಜಾರಾಮ್.ಕೆ.ಬಿ, ಉಲ್ಲಾಸ್ ಕೋಟ್ಯಾನ್, ಟ್ರಸ್ಟಿಗಳಾದ ಪ್ರಮಲ್ ಕುಮಾರ್, ನಾರಾಯಣ ಪೂಜಾರಿ, ಡಾ.ಸಂತೋಷ ಭೈರಂಪಳ್ಳಿ, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್ ಚಂದ್ರ. ಡಿ.ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್, ಅಧ್ಯಯನ ಪೀಠದ ಸಂಚಾಲಕ ಪಿ.ವಿ.ಮೋಹನ್ ನಂಬಿಯಾರ್, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ಶಾಸಕ ಸುನಿಲ್ ಕುಮಾರ್, ಬೆಳ್ತಂಗಡಿಯ ರಕ್ಷಿತ್ ಶಿವರಾಂ, ವಿಜಯ ಕುಮಾರ್ ಸೊರಕೆ, ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜೀತ್ ಸುರತ್ಕಲ್, ಜಯವಿಕ್ರಮ್ ಕಲ್ಲಾಪು ಮತ್ತಿತರರ ಉಪಸ್ಥಿತಿಯಲ್ಲಿ ಆಮಂತ್ರಣ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.




























