ಬಂಟ್ವಾಳ, ಇಡ್ಕಿದು ನಿವಾಸಿ ಹರೀಶ್ ರವರು ಪುತ್ತೂರಿನ ಕಾಂಪ್ಲೆಕ್ಸ್ ಒಂದರಲ್ಲಿ ವಾಹನಗಳ ಪೈಂಟಿಂಗ್ ಕೆಲಸ ಮಾಡಿಕೊಂಡಿದ್ದು, ಅದೇ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಆರೋಪಿ ಹೇಮಂತ್ ಆಚಾರ್ಯ ಎಂಬವರು ಹರೀಶ್ ರವರಿಗೆ ಸುಮಾರು ಒಂದು ತಿಂಗಳಿನಿಂದ ವಿನಾಃ ಕಾರಣ ಬೈಯ್ಯುವುದು ಮಾನಸಿಕ ಕಿರುಕುಳ ನೀಡುತ್ತಿದ್ದು, ಕಳೆದ ಕೆಲ ದಿನಗಳ ಹಿಂದೆ ಹರೀಶ್ ರವರಿಗೆ ಆರೋಪಿಯು ಹಲ್ಲೆ ಮಾಡಿ, ತಲ್ವಾರು ಹಿಡಿದು ಜೀವ ಬೆದರಿಕೆ ಹಾಕಿರುತ್ತಾರೆ.
ಈ ವಿಷಯ ಹರೀಶ್ ರವರು ಅವರ ಮಗಳಿಗೆ ತಿಳಿಸಿದ್ದು, ಆರೊಪಿಯ ಕಿರುಕುಳ ಹಾಗು ಹಲ್ಲೆಯಿಂದ ನೊಂದುಕೊಂಡಿದ್ದ ಹರೀಶ್ ರವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂಬುದಾಗಿ ಮೃತ ಹರೀಶ್ ರವರ ಮಗಳು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ : 112/2025 ಕಲಂ-108 BNS ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
ಸದ್ರಿ ಹರೀಶ್ ರವರ ಅಸ್ವಾಭಾವಿಕ ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ಪ್ರಕರಣ ದಾಖಲಾಗಿದ್ದು, ಮುಂದುವರಿದಂತೆ, ಮೃತರ ಮಗಳು ಈ ದಿನ ನೀಡಿದ ದೂರಿನ ಹಿನ್ನೆಲೆಯಲ್ಲಿ ಸದ್ರಿ ಪ್ರಕರಣವನ್ನು ಪುತ್ತೂರು ನಗರ ಠಾಣೆಗೆ ಮುಂದಿನ ತನಿಖೆಗಾಗಿ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.



























