ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಹೊಂದಿರುವ ಉದ್ಯಮಿಗೆ,ಅಲ್ಲಿ ತಿಂಗಳ ಹಿಂದೆ ಕೆಲಸ ಬಿಟ್ಟು ಹೋದ ವ್ಯಕ್ತಿ ಹಲ್ಲೆ ನಡೆಸಿದ್ದಾಗಿ ಆರೋಪಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ‘ಸ್ವಾತಿ’ ಬಾರ್ ಆ್ಯಂಡ್ ರೆಸ್ಟೋರೆಂಟ್ ಹೊಂದಿರುವ ವಿಜಯ ಬಿ.ಎಸ್. ಮತ್ತು ಅಲ್ಲಿದ್ದ ಪ್ರಸಾದ್ ಎಂಬವರಿಗೆ ಬಾರ್ನಲ್ಲಿ ಹಿಂದೆ ಅಡುಗೆ ಕೆಲಸ ಮಾಡಿಕೊಂಡಿದ್ದ ಗಿರೀಶ ಎಂಬವರು ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿದೆ.
ಗಿರೀಶ್ ಅವರು ತಿಂಗಳ ಹಿಂದೆ ಅಲ್ಲಿಂದ ಕೆಲಸಬಿಟ್ಟು ಹೋಗಿದ್ದು, ಜ.19ರಂದು ಬಾರ್ಗೆ ಬಂದು ‘ನಾನು ಅಡುಗೆ ಸಮಯ ತಂದಿರುವ ಪಾತ್ರೆಗಳು ಇಲ್ಲಿವೆ. ಅದನ್ನು ಕೊಂಡು ಹೋಗಲು ಬಂದಿರುವುದಾಗಿ ಹೇಳಿದಾಗ ವಿಜಯ ಬಿ.ಎಸ್.ಅವರು, ಇಲ್ಲಿ ನಿಮ್ಮ ಒಂದೇ ಪಾತ್ರೆ ಇರುವುದು ಎಂದಾಗ ಗಿರೀಶ್ ಅವರು ಕೋಪಗೊಂಡು ವಿಜಯ ಬಿ.ಎಸ್ ಅವರಿಗೆ ಹಲ್ಲೆ ನಡೆಸಿದ್ದಾರೆ.
ಇದನ್ನು ಬಿಡಿಸಲು ಬಂದ ಪ್ರಸಾದ್ ಅವರಿಗೂ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.
ಘಟನೆ ಕುರಿತು ವಿಜಯ ಬಿ.ಎಸ್ ಅವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

























