ಬೆಂಗಳೂರು: ಕಾಂಗ್ರೆಸ್ ಯುವ ಮುಖಂಡ ಮಹಮ್ಮದ್ ನಲಪಾಡ್ಗೆ ಇಂಡಿಯನ್ ಯೂಥ್ ಕಾಂಗ್ರೆಸ್ ಕೊನೆಗೂ ಸಮಾಧಾನಕರ ಸುದ್ದಿ ನೀಡಿದೆ. ಫೆಬ್ರವರಿ 2022ರಿಂದ ರಾಜ್ಯ ಕಾಂಗ್ರೆಸ್ನ ಯುವ ಘಟಕದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳಿ ಎಂದು ಸೂಚನೆ ನೀಡಿದೆ.
ಈ ಮೂಲಕ ನಲಪಾಡ್ ಕೆಪಿವೈಸಿ ಅಧ್ಯಕ್ಷರಾಗೋದು ಕನ್ಫಮ್ ಆಗಿದೆ. 2022ರ ಫೆಬ್ರವರಿಯಿಂದ ಮಹಮ್ಮದ್ ನಲಪಾಡ್ ರಾಜ್ಯ ಕಾಂಗ್ರೆಸ್ನ ಯುವ ಘಟಕದ ಅಧ್ಯಕ್ಷರಾಗಲಿದ್ದಾರೆ. ಇನ್ನು 2022ರ ಜನವರಿ 31ರವರೆಗೆ ರಕ್ಷಾ ರಾಮಯ್ಯ ಅವರೇ ಕೆಪಿವೈಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ.
ಈ ಬಗ್ಗೆ ರಾಷ್ಟ್ರೀಯ ಕಾಂಗ್ರೆಸ್ ಯುವ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ರಿಂದ ಅಧಿಕೃತ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ರಕ್ಷಾ ರಾಮಯ್ಯ ಹಾಗೂ ನಲಪಾಡ್ ಮಧ್ಯೆ ಪಟ್ಟಕ್ಕಾಗಿ ಫೈಟ್ ನಡೆದಿತ್ತು. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿತ್ತು. ಇದರ ಬೆನ್ನಲ್ಲೇ ಕೆಪಿವೈಸಿ ಅಧ್ಯಕ್ಷರಾಗುವ ಕನಸು ಕಟ್ಟಿದ್ದ ನಲಪಾಡ್ಗೆ ಐವೈಸಿ ಗುಡ್ನ್ಯೂಸ್ ನೀಡಿದೆ. ಇಂಡಿಯನ್ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.