ಮಂಗಳೂರು: ಪತಿ ಹಾಗೂ ಆತನ ಮನೆಯವರು ವರದಕ್ಷಿಣೆಗಾಗಿ ದೈಹಿಕ, ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಮಹಿಳೆಯೋರ್ವರು ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪತಿಯಾದ ತುಷಾರ್ ಬಿ. ಮನೈ ಮತ್ತು ಆತನ ಮನೆಯವರು ವರದಕ್ಷಿಣೆಗಾಗಿ ಹಿಂಸೆ ನೀಡಿದ್ದು, ತುಷಾರ್ ತಾನು ದುಬೈನಲ್ಲಿ ಹೋಟೆಲ್ ನಡೆಸುತ್ತಿದ್ದೇನೆ ಎಂದು ನಂಬಿಸಿ ಮದುವೆಯಾಗಿದ್ದು ಮದುವೆಯ ಎಲ್ಲಾ ಖರ್ಚುಗಳನ್ನು ವಧುವಿನ ಮನೆಯವರು ಬರೆಸಿದ್ದರು. ವರನ ಮನೆಯವರ ಬೇಡಿಕೆಯಂತೆ ಜಾಗ ಮಾರಿ ಸಾಲ ಮಾಡಿ 15 ಲಕ್ಷ ರೂ. ಗಳಿಗೂ ಅಧಿಕ ಹಣ ನೀಡಲಾಗಿತ್ತು. ಮದುವೆಯಾದ ಅನಂತರ ತುಷಾರ್ ಹಾಗೂ ಇತರರು ಸೇರಿ ಕಾರು ಖರೀದಿಸಲು 10 ಲಕ್ಷ ರೂ. ಹೆಚ್ಚುವರಿ ವರದಕ್ಷಿಣೆ ತರಬೇಕೆಂದು ಬಲವಂತ ಮಾಡಿ ಹಿಂಸೆ ನೀಡಿದ್ದಾರೆ.
ಇದಲ್ಲದೇ ಕಾರಿನ ಸಾಲದ ಜಾಮೀನಿಗೆ ಬಲವಂತವಾಗಿ ಸಹಿ ಪಡೆದುಕೊಂಡಿದ್ದಾರೆ ಮದ್ಯ ಸೇವಿಸಿ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.