ಪುತ್ತೂರು: ಕಳವು ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆಯ ಪೊಲೀಸರು ಬಂಧಿಸಿದ ಘಟನೆ ಆ.೬ ರಂದು ನಡೆದಿದೆ. ಆರೋಪಿಯನ್ನು ಲಿಂಗಪ್ಪ ಎಂದು ಗುರುತಿಸಲಾಗಿದೆ.
ಈತನ ವಿರುದ್ಧ ನಗರ ಠಾಣೆಯಲ್ಲಿ ಅಕ್ರ 117/1985 ಕಲಂ: 457,380 ಐಪಿಸಿ ( ಎಲ್ಪಿಸಿ 03/1989) ಕಳವು ಪ್ರಕರಣದಲಾಗಿದ್ದು, ಪ್ರಕರಣ ದಾಖಲಾದ ಕೂಡಲೇ ತಲೆಮರೆಸಿಕೊಂಡಿದ್ದ ಈತ ಶಿವಮೊಗ್ಗದಲ್ಲಿ 5 ವರ್ಷಗಳಿಂದ ಅಟೋ ಚಾಲಕನಾಗಿದ್ದು, ನಂತರ ಮಂಗಳೂರಿನ ತಣ್ಣೀರು ಬಾವಿ ಎಂಬಲ್ಲಿಗೆ ಬಂದು ಅನ್ಯಕೋಮಿನ ಹುಡುಗಿಯನ್ನು ಮದುವೆಯಾಗಿ ತನ್ನ ಹೆಸರನ್ನು ರೆಹಮತ್ ಖಾನ್ ಎಂಬುದಾಗಿ ಬದಲಾಯಿಸಿಕೊಂಡು ತಣ್ಣೀರಿ ಬಾವಿಯಲ್ಲಿ ವಾಸವಾಗಿದ್ದು ವಾರಂಟ್ ದಸ್ತಗಿರಿಗೆ ತಪ್ಪಿಸಿಕೊಂಡಿದ್ದ.

ಸುಮಾರು 29 ವರ್ಷಗಳ ಕಾಲ ತಣ್ಣೀರು ಬಾವಿಯಲ್ಲಿ ಕಪ್ಪು ಚಿಪ್ಪು ( ಸೆಲ್ಫಿಸ್ ) ವ್ಯಾಪಾರ ಮಾಡಿಕೊಂಡಿದ್ದು, ನಂತರ ಸುಮಾರು 3 ವರ್ಷಗಳಿಂದ ಓಶಿಯನ್ ಕಂಪೆನಿಯಲ್ಲಿ ಕಂನ್ಸಟ್ರಕ್ಷನ್ ಕೆಲಸವನ್ನು ಮುಂಡಗೋಡಿ, ಹುಬ್ಬಳ್ಳಿ, ಬೆಳಗಾಂ ಮುಂತಾದ ಕಡೆ ಮಾಡಿಕೊಂಡಿದ್ದ, ಸುಮಾರು ಒಂದು ವಾರದಿಂದ ಮಂಗಳೂರಿನ ತಿರುವೈಲ್ ಗ್ರಾಮ , ವಾಮಂಜೂರು ಹಾಲಿ ವಿಳಾಸಕ್ಕೆ ಬಂದಿದ್ದ ಎಂಬ ಮಾಹಿತಿ ಮೇರೆಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರ ಹಾಗೂ ಪುತ್ತೂರು ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಂತೆ ಹಾಗೂ ಪುತ್ತೂರು ನಗರ ಠಾಣೆಯ ಪೊಲೀಸ್ ನಿರೀಕ್ಷಕರಾದ ಗೋಪಾಲ ನಾಯ್ಕ್ ಮತ್ತು ಪೊಲೀಸ್ ಉಪ ನಿರೀಕ್ಷಕರಾದ ಸುತೇಶ್ ಮತ್ತು ನಸ್ರೀನ್ ತಾಜ್ ಚಟ್ಟರಕಿ ಇವರ ಸೂಚನೆಯಂತೆ ಪುತ್ತೂರು ನಗರ ಠಾಣಾ ಹೆಚ್ಸಿ ಪರಮೇಶ್ವರ್ ಮತ್ತು ಹೆಚ್ಸಿ ಕೃಷ್ಣಪ್ಪ ರವರು ಆರೋಪಿಯನ್ನು ಬಂಧಿಸಿದ್ದಾರೆ.