ಪುತ್ತೂರು: ಅನಾರೋಗ್ಯದಿಂದಾಗಿ ಬಪ್ಪಳಿಗೆ ನಿವಾಸಿ ಶೇಖ್ ರಿಯಾಝ್ ರವರು ಆ.16 ರಂದು ನಿಧನರಾದರು.
ಅನಾರೋಗ್ಯದಿಂದಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶೇಖ್ ರಿಯಾಝ್ ರವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಎರಡು ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.



























