ವಿಟ್ಲ: ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಸೆರ್ಕಳ ಕಲ್ಲಮಜಲು ಎಂಬಲ್ಲಿ ಮಧ್ಯರಾತ್ರಿ ಕೇರಳ ನೋಂದಣಿಯ ಮಾರುತಿ ರಿಡ್ಜ್ ಕಾರಿನಲ್ಲಿ ಮೂವರು ಯುವಕರು ಅನುಮಾನಾಸ್ಪದವಾಗಿ ಮನೆಯೊಂದರ ಬಳಿ ನಿಂತಿದ್ದು, ಸುದ್ದಿ ತಿಳಿದು ಸ್ಥಳೀಯರು ವಿಚಾರಿಸಿದಾಗ ಕೇರಳದ ವಡಗರ ಎಂದು ಅಸ್ಪಷ್ಟ ಮಾಹಿತಿ ನೀಡಿದ ಕಾರಣ ಸ್ಥಳೀಯರು ವಿಟ್ಲ ಪೊಲೀಸ್ ಠಾಣೆಗೆ ಕರೆ ಮಾಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಸೆರ್ಕಳ ಸಲೀಂ ಎಂಬಾತ ನಮ್ಮನ್ನು ಬರುವಂತೆ ಹೇಳಿದ್ದಾನೆ ಎಂದು ಈ ಮೂವರು ತಿಳಿಸಿದ್ದು, ಯಾವ ಉದ್ಧೇಶಕ್ಕಾಗಿ ಎಂಬುದನ್ನು ಸ್ಪಷ್ಟವಾಗಿ ತಿಳಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮೂವರ ಹೇಳಿಕೆಗಳು ಬೇರೆ ಬೇರೆ ರೀತಿಯಲ್ಲಿ ಇದ್ದ ಕಾರಣ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದು, ಮೂವರನ್ನೂ ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.




























