ಹೆಬ್ರಿ: ಪ್ರತಿಭಾನ್ವಿತ ವಾಲಿಬಾಲ್ ಆಟಗಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ರಿಯಲ್ಲಿ ನಡೆದಿದೆ.
ಹೆಬ್ರಿ ಕೆಳಪೇಟೆ ಶೇರಿಗಾರ್ ಬೆಟ್ಟು ನಿವಾಸಿ ಪ್ರಶಾಂತ್ ಯಾನೆ ಪಚ್ಚು(30) ಸೋಮವಾರ ತಡರಾತ್ರಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.
ಭೂತದ ಕೋಲ ಮೊದಲಾದ ಕಾರ್ಯಕ್ರಮಗಳಲ್ಲಿ ಠಾಸೆ ಬಾರಿಸುವುದರಲ್ಲಿ ನಿಪುಣರಾಗಿದ್ದ ಇವರು ಉತ್ತಮ ವಾಲಿಬಾಲ್ ಆಟಗಾರಾಗಿದ್ದರು.
ಈ ಕುರಿತು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .


























