ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಶಿವಮೊಗ್ಗದ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮಾಹಿತಿ ನೀಡಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಹರ್ಷ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮಾ.6 ರಂದು ಭಾನುವಾರ ಹರ್ಷ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ಮೊತ್ತವನ್ನು ಹಸ್ತಾಂತರ ಮಾಡಲಿದ್ದಾರೆ.
2015 ಕೊಲೆಯಾದ ಹಿಂದೂ ಕಾರ್ಯಕರ್ತರ ವಿಶ್ವನಾಥ್ ಶೆಟ್ಟಿಗೆ 18 ಲಕ್ಷ ರೂಪಾಯಿ ಪರಿಹಾರ ಆತನ ಎರಡನೇ ಹೆಂಡತಿ ಮತ್ತು ತಂದೆಗೆ ನೀಡಲಾಗಿತ್ತು. ಪತ್ನಿಯು ತಂದೆ-ತಾಯಿ ಬಿಟ್ಟು ಹೋಗಿದ್ದಾಳೆ. ಈಗ ವಿಶ್ವನಾಥ್ ತಾಯಿ ಮಾತ್ರ ಬದುಕಿದ್ದಾರೆ. ಈಗ ವಿಶ್ವನಾಥ್ ಕುಟುಂಬಕ್ಕೆ ಕಾಂಗ್ರೆಸ್ ಸಾಂತ್ವನ ಹೇಳುತ್ತಿರುವುದು ಅಚ್ಚರಿ ಮೂಡಿಸಿದೆ. ಅಂದಿನ ಕಾಂಗ್ರೆಸ್ ಸರ್ಕಾರ ಆತನ ಕುಟುಂಬಕ್ಕೆ ಪರಿಹಾರ ನೀಡಿಲ್ಲ. ಈಗ ವಿಶ್ವನಾಥ್ ತಾಯಿಗೆ ಬಿಜೆಪಿ ಮತ್ತು ಸಂಘ ಪರಿಹಾರ ಆರ್ಥಿಕ ಸಹಾಯ ಮಾಡಲಿದೆ ಎಂದರು.




























