ಕಾಣಿಯೂರು: ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಕಾಣಿಯೂರು ಸಮೀಪ ನಡೆದಿದ್ದು, ಆರೋಪಿ ಬಂಡಾಜೆ ನಿವಾಸಿ ಚಂದ್ರಶೇಖರ (57)ನನ್ನು ಪೊಲೀಸರು ಬಂಧಿಸಿದ್ದಾರೆ.
ಯುವತಿಯ ಸಹೋದರ ಚಾರ್ವಾಕದಲ್ಲಿರುವ ತನ್ನ ಜಮೀನಿನಲ್ಲಿ ಕೃಷಿ ಕೆಲಸದ ಬಗ್ಗೆ ತಂದೆ, ತಾಯಿಯವರನ್ನು ಬಿಟ್ಟು ಬರಲು ಹೋದ ಸಂದರ್ಭ, ಬುದ್ಧಿಮಾಂದ್ಯಳಾದ ಅಕ್ಕ ಮನೆಯಲ್ಲಿ ಒಬ್ಬಳೇ ಇದ್ದರು.
ಚಾರ್ವಾಕದಿಂದ ವಾಪಸು ಮನೆಗೆ ಬಂದಾಗ ಮನೆಯಲ್ಲಿದ್ದ ಅಕ್ಕ ಕಾಣದೇ ಇದ್ದಾಗ ಹುಡುಕುತ್ತಿರುವ ವೇಳೆ ಮನೆಯ ಎದುರಿನ ಗುಡ್ಡದಿಂದ ಬರುತ್ತಿದ್ದಳು. ವಿಚಾರಿಸಿದಾಗ ಆರೋಪಿ ಚಂದ್ರಶೇಖರ “ನೀನು ನನ್ನ ಜತೆ ಗುಡ್ಡಕ್ಕೆ ಬರಬೇಕು. ಇಲ್ಲದಿದ್ದರೆ ನಿನಗೆ ತೊಂದರೆ ನೀಡುತ್ತೇನೆ’ ಎಂದು ಬೆದರಿಸಿ ಕರೆದೊಯ್ದಿದ್ದಾನೆ ಎಂದು ಆಕೆ ಹೇಳಿದ್ದಾಳೆ ಎಂದು ಸಹೋದರ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.




























