ಬೆಂಗಳೂರು: ನ್ಯಾಯಕೊಡಿಸದಿದ್ರೆ ಟೆರರಿಸ್ಟ್ಗಳ ಜೊತೆ ಕೈಜೋಡಿಸುತ್ತೇವೆ ಎಂದು ನೊಂದ ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದಿದ್ದಾರೆ. ರಕ್ತದಲ್ಲಿ ಎರಡು ಪುಟಗಳ ಪತ್ರ ಬರೆದು ನ್ಯಾಯ ಓದಗಿಸುವಂತೆ ಅವರು ಮನವಿ ಮಾಡಿದ್ದಾರೆ.

ಪರೀಕ್ಷೆ ಆಯ್ಕೆಯಲ್ಲಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು. ಪಿಎಸ್ಐ ಪರೀಕ್ಷೆಯಲ್ಲಿ ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಬೇಕು ಎಂದು ಒತ್ತಾಯ ಮಾಡಿರುವ ಅವರು ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಮಾತ್ರ ಎನ್ನುವ ಪರಿಸ್ಥಿತಿಯಿದೆ. ಸರ್ಕಾರದ ಈ ವ್ಯವಸ್ಥೆಯಿಂದ ಮಾನಸಿಕವಾಗಿ ಸತ್ತುಹೋಗಿದ್ದೇವೆ.
ಇನ್ಮುಂದೆ ಸರ್ಕಾರಿ ಹುದ್ದೆ ಪರೀಕ್ಷೆಗಳನ್ನ ಬರೆಯಲಾಗುವುದಿಲ್ಲ. ಟೆರೆರಿಸ್ಟ್ಗಳ ಜೊತೆ, ನಕ್ಸಲ್ ಸಂಘಟನೆ ಸೇರಲು ಇಚ್ಛಿಸಿದ್ದೇವೆ. ಅವರಿಂದ ಹಣ ಪಡೆದು ಬಡ ಕುಟುಂಬಕ್ಕೆ ಸಹಾಯ ಮಾಡುತ್ತೇವೆ ಎಂಬುದನ್ನೂ ಸಹ ಅವರು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ನಾವು 8 ಮಂದಿ ಇದ್ದೇವೆ, ನಾವೆಲ್ಲಾ ಈ ನಿರ್ಧಾರ ಮಾಡಿದ್ದೀವಿ ಎಂದು ನೊಂದ ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.




























