ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿಗೆ ಆಗಮಿಸಿದ್ದ ಮತ್ತೊರ್ವವಿದ್ಯಾರ್ಥಿನಿಯನ್ನು ಅಮಾನತು ಗೊಳಿಸಿದ ಘಟನೆ ಜೂ.3 ರಂದು ನಡೆದಿದೆ.
ಜೂ.3 ರಂದು ಹಿಜಾಬ್ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶುಪಾಲರು ವಾರದ ಮಟ್ಟಿಗೆ ಅಮಾನತು ಗೊಳಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಿಡಿಸಿ ಸಭೆಯಲ್ಲಿ ಸ್ಪಷ್ಟ ನಿರ್ಧಾರ ತಳೆಯಲಾಗಿದೆ. ಕಾಲೇಜು ಆವರಣದಲ್ಲಿ ಕಾಲೇಜು ಸಮವಸ್ತ್ರಕ್ಕೆ ಹೊರತಾದ ಬಟ್ಟೆ ತೊಡುವಂತಿಲ್ಲ. ಈ ನಿಯಮವನ್ನು ಉಲ್ಲಂಘಿಸುವ ವಿದ್ಯಾರ್ಥಿಗಳನ್ನು ತತ್ಕ್ಷಣ ಅಮಾನತುಗೊಳಿಸಬೇಕು. ಬಳಿಕ ಮುಚ್ಚಳಿಕೆ ಬರೆಸಿಕೊಂಡು ಕಲಿಕೆಗೆ ಅವಕಾಶ ಕಲ್ಪಿಸಬೇಕು. ಮುಚ್ಚಳಿಕೆಯ ಹೊರತಾಗಿಯೂ ನಿಯಮ ಉಲ್ಲಂಘಿಸುವ ಕೃತ್ಯವೆಸಗಿದರೆ ನಿರ್ದಾಕ್ಷಿಣ್ಯವಾಗಿ ಕಾಲೇಜಿನಿಂದ ಡಿಬಾರ್ ಮಾಡಬೇಕೆಂದು ನಿರ್ಣಯ ಕೈಗೊಂಡು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿದು ಬಂದಿದೆ.

























