ಸುಳ್ಯ: ಕ್ಷುಲ್ಲಕ ಕಾರಣಕ್ಕೆ ನಡೆದ ಹೊಡೆದಾಟದಲ್ಲಿ ಗಂಭೀರ ಗಾಯಗೊಂಡು, ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಮಸೂದ್ ಕುಟುಂಬಕ್ಕೆ ಪರಿಹಾರ ನೀಡಲು ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಒಪ್ಪಿಕೊಂಡಿದೆ.

ಹಲ್ಲೆಗೊಳಗಾಗಿ ಸಾವನ್ನಪ್ಪಿರುವ ಮಸೂದ್ ಮೃತದೇಹವನ್ನು
ಅಂತ್ಯಸಂಸ್ಕಾರಕ್ಕಾಗಿ ತೆಗೆಯಬೇಕಾದರೆ ಸರಕಾರ 25 ಲಕ್ಷ ರೂ. ಪರಿಹಾರ ನೀಡಬೇಕು, ಆಸ್ಪತ್ರೆಯ ಬಿಲ್ಲನ್ನು ಸರಕಾರವೇ
ಪಾವತಿಸಬೇಕು, ಸ್ವತಃ ಜಿಲ್ಲಾಧಿಕಾರಿಗಳೇ ಆಸ್ಪತ್ರೆಗೆ ಬಂದು ಭರವಸೆ ನೀಡಬೇಕು ಎಂದು ಮುಸ್ಲಿಮ್ ಒಕ್ಕೂಟದ ಮುಖಂಡರು
ಜಿಲ್ಲಾಡಳಿತವನ್ನು ಆಗ್ರಹಿಸಿದ್ದರು.

ಮಂಗಳೂರಿನ ಆಸ್ಪತ್ರೆಯ ಮುಂದೆ ನೂರಾರು ಮಂದಿ ಮುಸ್ಲಿಂ
ಸಮಾಜ ಬಾಂಧವರು ಜಮಾಯಿಸ ತೊಡಗಿದ್ದರು. ಪರಿಸ್ಥಿತಿಯ
ಗಂಭೀರತೆಯನ್ನು ಅರಿತ ಜಿಲ್ಲಾಧಿಕಾರಿಗಳು ಮಂಗಳೂರು
ತಹಶೀಲ್ದಾರ್ ರನ್ನು ಮಾತುಕತೆಗಾಗಿ ಆಸ್ಪತ್ರೆ ಕಳುಹಿಸಿದರು. ಜತೆಗೆ
ಮಂಗಳೂರಿನ ಪೊಲೀಸ್ ಕಮಿಷನರ್ ಡಾ. ಶಶಿಧರ್ ಮತ್ತಿತರ ಅಧಿಕಾರಿಗಳು ಆಸ್ಪತ್ರೆಗೆ ಬಂದರು ಅಲ್ಲಿ ಮಾತುಕತೆ ನಡೆದ ಸಂದರ್ಭ ಮೃತರ ಕುಟುಂಬಕ್ಕೆ ಇಪ್ಪತ್ತೈದು ಲಕ್ಷ ರೂ. ಪರಿಹಾರವನ್ನು ಸರಕಾರ ನೀಡಬೇಕು ಎಂಬ ಬೇಡಿಕೆಯನ್ನು ಮುಸ್ಲಿಮ್ ಒಕ್ಕೂಟದ ಮುಖಂಡರು ಮುಂದಿಟ್ಟರು. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಫೋನ್ ಮೂಲಕ ಚರ್ಚೆ ನಡೆಸಿದ
ತಹಶೀಲ್ದಾರ್ ಜಿಲ್ಲಾಧಿಕಾರಿಗಳು ಸರಕಾರಕ್ಕೆ ಶಿಫಾರಸು ಮಾಡಲು
ಒಪ್ಪಿರುವುದಾಗಿ ಹೇಳಿದರೆನ್ನಲಾಗಿದೆ.
ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ಮಸೂದ್ ಗೆ ಚಿಕಿತ್ಸೆ ನೀಡಿದ ಬಾಬು
43 ಸಾವಿರ ಬಿಲ್ ಆಗಿದ್ದು, ಅದರಲ್ಲಿ 13 ಸಾವಿರ ರೂ. ಗಳನ್ನು ಸುಳ್ಯದ ಮುಖಂಡರು ಮಾತನಾಡಿದ ಮೇರೆಗೆ ಕಡಿಮೆ ಮಾಡಲಾಗಿತ್ತೆನ್ನಲಾಗಿದೆ. ಉಳಿದ 30 ಸಾವಿರ ರೂ.ಗಳನ್ನು
ಜಿಲ್ಲಾಡಳಿತವೇ ಪಾವತಿಸಬೇಕೆಂಬ ಮುಖಂಡರ ಆಗ್ರಹವನ್ನೂ
ಜಿಲ್ಲಾಡಳಿತ ಒಪ್ಪಿಕೊಂಡಿತೆನ್ನಲಾಗಿದೆ.
ತಮ್ಮ ಬೇಡಿಕೆಗಳಿಗೆ ಜಿಲ್ಲಾಡಳಿತ ಒಪ್ಪಿದ ಹಿನ್ನಲೆಯಲ್ಲಿ ಮಸೂದ್ ಮೃತದೇಹವನ್ನು ಪೋಸ್ಟ್ ಮಾರ್ಟಮ್ ಗೆ ಕಳುಹಿಸಲು ಅವರ ಕುಟುಂಬಿಕರು ಮತ್ತು ಸಮಾಜ ಬಾಂಧವರು ಒಪ್ಪಿದರು. ಅದರಂತೆ ಇದೀಗ ಮೃತದೇಹದ ಮರಣೋತ್ತರ ಪರೀಕ್ಷೆ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಈ ಮಾತುಕತೆಯಲ್ಲಿ ಮಂಗಳೂರು ಶಾಸಕ ಯು.ಟಿ. ಖಾದರ್, ಸುಳ್ಯದ ಮುಸ್ಲಿಂ ಮುಖಂಡರುಗಳಾದ ಕೆ.ಎಂ.ಮುಸ್ತಫಾ, ಇಕ್ಬಾಲ್ ಬೆಳ್ಳಾರೆ, ಜಾಬಿರ್ ಅರಿಯಡ್ಕ, ಸುಹೈಲ್ ಕಂದಕ್, ಶಾಹುಲ್ ಹಮೀದ್, ಅಬ್ದುಲ್ ಗಫೂರ್ ಕಲ್ಮಡ್ಕ, ಇಸ್ಮಾಯಿಲ್ ಪಡ್ಪಿನಂಗಡಿ ಮೊದಲಾದವರು ಉಪಸ್ಥಿತರಿದ್ದರು ತಿಳಿದು ಬಂದಿದೆ.
ಮಸೂದೆ ಮೃತದೇಹದ ಮರಣೋತ್ತರ ಪರೀಕ್ಷೆಯ ಬಳಿಕ ಅಂತ್ಯಸಂಸ್ಕಾರಕ್ಕಾಗಿ ದೇಹವನ್ನು ಬೆಳ್ಳಾರೆಗೆ ತರಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.


























