ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯತೆ, ಸಂಸ್ಕಾರ ಬೆಳೆಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ. ಉತ್ತಮ ಪ್ರಜೆಯೂ ಒಳ್ಳೆಯ ರಾಷ್ಟ್ರವನ್ನು ಕಟ್ಟಲು ಸಾಧ್ಯ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಜೊತೆ ಕಾರ್ಯದರ್ಶಿ ರೂಪಲೇಖ ಪಾಣಾಜೆ ಹೇಳಿದರು.

ಅವರು ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯ ತೆಂಕಿಲ ಪುತ್ತೂರು, ದ.ಕ ಕನ್ನಡ ಸಾಹಿತ್ಯ ಪರಿಷತ್ತು, ಪುತ್ತೂರು ತಾಲೂಕು ಘಟಕ ಮತ್ತು ರೇಡಿಯೋ ಪಾಂಚಜನ್ಯ 90.8 ಎಫ್.ಎಂ ನೆಹರೂನಗರ ಪ್ರಸ್ತುತಪಡಿಸುವ ತಾಲೂಕು ಮಟ್ಟದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದು ಮತ್ತು ದೇಶಪ್ರೇಮದ ಪ್ರಜ್ಞೆಯನ್ನು ಮೂಡಿಸುವುದರಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷರು ಸುಧಾಕರ್ ರೈ ಮಾತನಾಡಿ, ಭಾರತದ ಸ್ವಾತಂತ್ರ್ಯಕ್ಕಾಗಿ ಹಲವಾರು ವೀರರು ಹುತಾತ್ಮರಾದರು ಅವರ ಬಲಿದಾನ ಸಾರ್ಥಕತೆ ಆಗಬೇಕಾದರೆ ನಮ್ಮ ದೇಶಕ್ಕೆ ಗೌರವ ನೀಡಿದವರ ಹೆಸರನ್ನು ಉಳಿಸಿಕೊಳ್ಳಬೇಕು ಎಂದರು.

ದ.ಕ ಜಿಲ್ಲಾ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರು ಉಮೇಶ್ ನಾಯಕ್ ಪ್ರಾಸ್ತಾವಿಕ ನುಡಿಯನ್ನು ಹೇಳಿದರು. ಕಾರ್ಯಕ್ರಮದಲ್ಲಿ ಬಿ. ಎಡ್ ವಿದ್ಯಾರ್ಥಿಗಳ ಕೈಚಳಕದಲ್ಲಿ ಮೂಡಿಬಂದ ಪುಸ್ತಕ ವಿಮರ್ಶೆಯ ಪುಸ್ತಕ ಬಿಡುಗಡೆ ಮಾಡಲಾಯಿತು.

ದೇಶಭಕ್ತಿ ಗೀತೆ ಮತ್ತು ಭಾಷಣ ಸ್ಪರ್ಧೆಯ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ ಶೋಭಿತ ಸತೀಶ್ ಸ್ವಾಗತಿಸಿದರು. ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ಅಧ್ಯಕ್ಷರು ಕೃಷ್ಣವೇಣಿ ಪ್ರಸಾದ್ ಮುಳಿಯ ವಂದಿಸಿದರು. ಪ್ರಶಿಕ್ಷಣಾರ್ಥಿಗಳಾದ ಅನುಷಾ, ಶ್ರೀಹಿತ, ಜೀವಿತ ಕಾರ್ಯಕ್ರಮವನ್ನು ನಿರೂಪಿಸಿದರು.




























