ಮೂಡಿಗೆರೆ: ಪುತ್ತೂರಿನಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗೆಹಾರ ಮತ್ತು ಬಣಕಲ್ ಹೆದ್ದಾರಿಯ ಹೆಬ್ಬರಿಗೆ ಬಳಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ನಿವಾಸಿಗಳು ಪ್ರವಾಸಕ್ಕೆಂದು ಆಗಮಿಸಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಎರಡು ಪಲ್ಟಿಯಾಗಿದೆ.
ಕಾರಿನಲಿದ್ದ ಆರು ಜನರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


























