ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಬೆಂಕಿ ಬೆಂಕಿ ಕಾಣಿಸಿಕೊಂಡ ಘಟನೆ ಘಟನೆ ಆ.1 ರ ನಸುಕಿನ ಜಾವ ನಡೆದಿದೆ.
ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ನೊಳಗೆ 3 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಹೊಗೆ ಆವರಿಸಿತ್ತು.
ಈ ವೇಳೆ ರಾತ್ರಿ ಬಸ್ ನಿಲ್ಧಾಣದ ಕರ್ತವ್ಯದಲ್ಲಿದ್ದ ಪುತ್ತೂರು ನಗರ ಪೊಲೀಸ್ ಠಾಣೆ ಸಿಬ್ಬಂದಿ ಭೀಮ್ ಸೇನ್ ಮತ್ತು ಗೃಹರಕ್ಷಕದಳದ ಸಿಬ್ಬಂದಿ ಸುದರ್ಶನ್ ಹೊಗೆ ಬರುವುದನ್ನು ಗಮನಿಸಿ ಪರಿಶೀಲಿಸಿದಾಗ ಜ್ಯೂಸ್ ಸೆಂಟರ್ ಅಂಗಡಿಗೆ ಬೆಂಕಿ ತಗಲಿರುವ ತಿಳಿದು ಬಂದಿದೆ.

ಕೂಡಲೇ ಮಾಹಿತಿಯನ್ನು ರಾತ್ರಿ ರೌಂಡ್ಸ್ ನಲ್ಲಿದ್ದ ಎ.ಎಸ್.ಐ ಚಕ್ರಪಾಣಿ ಮತ್ತು ಅಗ್ನಿಶಾಮಕ ದಳದವರಿಗೂ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕದಳದವರು ಬಂದು ಜ್ಯೂಸ್ ಸೆಂಟರ್ ಶಟರ್ ಬೀಗ ಒಡೆದು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


























