Zoomin Tv
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
  • ನ್ಯೂಸ್
    • All
    • ಪುತ್ತೂರು
    • ಬಂಟ್ವಾಳ
    • ಬೆಂಗಳೂರು
    • ಬೆಳ್ತಂಗಡಿ
    • ಮಂಗಳೂರು
    • ಸುಳ್ಯ
    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಅನ್ಯಕೋಮಿನ ಯುವಕನೊಂದಿಗೆ ಹಿಂದೂ ಯುವತಿ ಪರಾರಿ​​: ವಿದೇಶದಿಂದ ಬಂದ ತಂದೆ, ಮಗಳಿಗಾಗಿ ಕಣ್ಣೀರು..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

    ಸಾರಥಿಗಳಿಗೆ ಸುವರ್ಣಾವಕಾಶ: ತಿರುಮಲ ಹೋಂಡಾದಿಂದ ವಿಶೇಷ ‘ಸಾರಥಿ ಸ್ಪೆಷಲ್ ಸ್ಕೀಮ್’ ಘೋಷಣೆ..!!

  • ರಾಜ್ಯ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಕ್ರೈಮ್
  • ಇತರ
    • ಸಿನಿಮಾ
    • ಕ್ರೀಡೆ
    • ಕೃಷಿ
    • ಆರೋಗ್ಯ
    • ವಾಣಿಜ್ಯ
    • ಶಿಕ್ಷಣ
    • ಆವಿಷ್ಕಾರ
No Result
View All Result
Zoomin Tv
No Result
View All Result
Home Featured

ಫಾಸಿಲ್ ಹತ್ಯೆ : ಬಂಧಿತ ಆರೋಪಿಗಳ ಹಿನ್ನಲೆ : ಕೃತ್ಯದಲ್ಲಿ ಭಾಗಿಯಾದ ರೀತಿ ಹೇಗೆ..!?? ಪ್ರೀತಿ – ಪ್ರೇಮ, ಆಂತರಿಕ ಘರ್ಷಣೆ, ರಾಂಗ್ ಟಾರ್ಗೆಟ್ ಎಂಬಿತ್ಯಾದಿ ಗಾಳಿ ಸುದ್ದಿ :ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್..!!!

August 3, 2022
in Featured, ಕ್ರೈಮ್, ನ್ಯೂಸ್, ಪುತ್ತೂರು, ಬಂಟ್ವಾಳ, ಮಂಗಳೂರು
0
ಫಾಸಿಲ್ ಹತ್ಯೆ : ಬಂಧಿತ ಆರೋಪಿಗಳ ಹಿನ್ನಲೆ : ಕೃತ್ಯದಲ್ಲಿ ಭಾಗಿಯಾದ ರೀತಿ ಹೇಗೆ..!?? ಪ್ರೀತಿ – ಪ್ರೇಮ, ಆಂತರಿಕ ಘರ್ಷಣೆ, ರಾಂಗ್ ಟಾರ್ಗೆಟ್ ಎಂಬಿತ್ಯಾದಿ ಗಾಳಿ ಸುದ್ದಿ :ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್..!!!
Share on WhatsAppShare on FacebookShare on Twitter
Advertisement
Advertisement
Advertisement
Advertisement
Advertisement

ಮಂಗಳೂರು: ಫಾಜಿಲ್​ ಹತ್ಯೆ ಪ್ರಕರಣದಲ್ಲಿ ಬಂಧನವಾಗಿದ್ದ ಅಜಿತ್​ ಡಿಸೋಜಾ ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 6 ಮಂದಿ ಆರೋಪಿಗಳನ್ನು ಇಂದು ಬೆಳಗ್ಗೆ ಬಂಧನ ಮಾಡಿದ್ದಾರೆ. ಸಂಜೆ ವೇಳೆಗೆ ಆರೋಪಿಗಳನ್ನು ಕೋರ್ಟ್​​ಗೆ ಹಾಜರು ಪಡಿಸಿ, 14 ದಿನಗಳ ಕಾಲ ಪೊಲೀಸ್​ ವಶಕ್ಕೆ ನೀಡಲು ಮನವಿ ಮಾಡೋದಾಗಿ ಕಮಿಷನರ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ. ಈ ನಡುವೆ ಆರೋಪಿಗಳ ಬಂಧನ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಮಿಷನರ್, 6 ಮಂದಿಯ ಹಿನ್ನೆಲೆಯನ್ನು ಬಿಚ್ಚಿಟ್ಟಿದ್ದಾರೆ.

Advertisement
Advertisement
Advertisement

ಕೊಲೆ ಪ್ರಕರಣದಲ್ಲಿ ಸದ್ಯ ಸುಹಾಸ್ ಶೆಟ್ಟಿ (29), ಮೋಹನ್ (26), ಗಿರಿಧರ್ (23), ಅಭಿಷೇಕ್ (21), ಧೀಕ್ಷಿತ್ (21), ಶ್ರೀನಿವಾಸ್ (23) ಎಂಬ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದು, ಬಂಧಿತರೆಲ್ಲರ ವಿರುದ್ಧ ಅನೇಕ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, ರೌಡಿ ಶೀಟರ್​ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆರೋಪಿಗಳ ಹಿನ್ನಲೆ:

Advertisement
Advertisement

ಸುಹಾಸ್ ಶೆಟ್ಟಿ – 29 ವರ್ಷದ ಆರೋಪಿ ಸುಹಾಸ್​ ಮಂಗಳೂರಿನ ಬಜ್ಪೆಯ ಕೊಂಚಾರುವಿನ ಬಜ್ಪೆ ಚೆಕ್ ಪೋಸ್ಟ್​ನಲ್ಲಿ ವಾಸಿಸುತ್ತಿದ್ದು, ಆತನ ಮೇಲೆ ಗಲಾಟೆ, ಹಲ್ಲೆ, ಬೆದರಿಕೆ ಆರೋಪಗಳ ಹಿನ್ನೆಲೆಯಲ್ಲಿ ಬಜ್ಪೆಯಲ್ಲಿ 4, ಬೆಳ್ತಂಗಡಿ ಯಲ್ಲಿ ಒಂದು ಪ್ರಕರಣ ದಾಖಲಾಗಿದೆ.

ಮೋಹನ್ ಅಲಿಯಾಸ್ ಮೋಹನ್ ಸಿಂಗ್ – 26 ವರ್ಷದ ಆರೋಪಿ ಮೋಹನ್ ಮಂಗಳೂರಿನ ಕುಳಾಯಿಯ ಕಾವಿನ ಕಲ್ಲು 2ನೇ ಅಡ್ಡ ರಸ್ತೆಯಲ್ಲಿ ವಾಸಿಸುತ್ತಿದ್ದಾನೆ. ಆತನ ವಿರುದ್ಧ ಹಲ್ಲೆ, ಗಲಾಟೆ, ಬೆದರಿಕೆ ಆರೋಪಗಳ ಹಿನ್ನೆಲೆಯಲ್ಲಿ ಸುರತ್ಕಲ್​​​ ಹಾಗೂ ಕಾವುರು ಠಾಣೆಯಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ಗಿರಿಧರ– 23 ವರ್ಷದ ಆರೋಪಿ ಗಿರಿಧರ ಮಂಗಳೂರಿನ ಸುರತ್ಕಲ್​​ನ ವಿದ್ಯಾನಗರ ಕುಳಾಯಿ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಗಲಾಟೆ, ಬೆದರಿಕೆ ಸಂಬಂಧ 2 ಪ್ರಕರಣಗಳು ದಾಖಲಾಗಿದೆ.

ಅಭಿಷೇಕ್– 21 ವರ್ಷ ವರ್ಷದ ಆರೋಪಿ ಅಭಿಷೇಕ್ ಮಂಗಳೂರಿನ ಸುರತ್ಕಲ್​​ನ ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಗಲಾಟೆ, ಬೆದರಿಕೆ ಸಂಬಂಧ 2 ಪ್ರಕರಣಗಳು ದಾಖಲಾಗಿದೆ.

ಶ್ರೀನಿವಾಸ-23 ವರ್ಷದ ಆರೋಪಿ ಶ್ರೀನಿವಾಸ ಮಂಗಳೂರಿನ ಸುರತ್ಕಲ್​​ನ ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 3, ಉರ್ವ ಪೊಲೀಸ್​ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ.

ದೀಕ್ಷಿತ್– 21 ವರ್ಷದ ಆರೋಪಿ ದೀಕ್ಷಿತ್ ಮಂಗಳೂರಿನ ಸುರತ್ಕಲ್​​ನ ಕಾವಳ 2ನೇ ಬ್ಲಾಕ್ ನಿವಾಸಿಯಾಗಿದ್ದು, ಈತನ ವಿರುದ್ಧ ಸುರತ್ಕಲ್, ಮಂಪೂರ್ವ, ಕಾವೂರು ಪೊಲೀಸ್​ ಠಾಣೆಗಳಲ್ಲಿ ತಲಾ ಒಂದು ಪ್ರಕರಣ ದಾಖಲಾಗಿದೆ.

ತಂಡಗಳಾಗಿ ಕಾರ್ಯಚರಣೆ:ಡಿಸಿಪಿ ಅಂಶು ಕುಮಾರ್ ನೇತೃತ್ವದಲ್ಲಿ ಕ್ರೈಂ ಡಿಸಿಪಿ ದಿನೇಶ್ ಕುಮಾರ್, ನಾರ್ತ್ ಎಸಿಪಿ ಮಹೇಶ್ ಕುಮಾರ್ ಅವರ ಉಪವಿಭಾಗದ ಅಧಿಕಾರಿಗಳು, ಸಿಸಿಬಿ ಯ ಮಹೇಶ್ ಪ್ರಸಾದ್ ಮತ್ತು ಸಿಬ್ಬಂದಿಗಳು ನಿರಂತರ ಹಲವು ತಂಡಗಳಾಗಿ ಕಾರ್ಯಚರಣೆ ನಡೆಸಲಾಗಿ ಆರೋಪಿಗಳನ್ನು ಬಂಧಿಸಲಾಗಿದೆ.

ಹತ್ಯೆ ಸಂಚು ರೂಪಿಸಿದ್ದ ಸುಹಾಸ್ ಶೆಟ್ಟಿ : ಈ ತಂಡದ ಆರೋಪಿಗಳು ಒಬ್ಬರಿಗೊಬ್ಬರು ಪರಿಚಯಸ್ಥರಲ್ಲ, ಕೃತ್ಯಕ್ಕೆ ಸುಹಾಸ್ ಶೆಟ್ಟಿ ಮೊದಲು ಆರೋಪಿ ಅಭಿಷೇಕ್ ಜೊತೆ ಸೇರಿ ಜುಲೈ 26 ರಂದು ಯೋಜನೆ ರೂಪಿಸಿದ್ದು ಒಬ್ಬೊಬ್ಬರಾಗಿ ಸೇರಿಕೊಂಡು ತಂಡವಾಗಿ ಕೆಲಸ ಮಾಡಿದ್ದಾರೆ. ಯಾರನ್ನಾದರೂ ಹೊಡೆಯಬೇಕು ಎಂದು ಯೋಜಿಸಿ, ಹತ್ಯೆಗಾಗಿ ಮೊದಲು 6-7 ಮಂದಿಯನ್ನು ಟಾರ್ಗೆಟ್ ಮಾಡಿ ಅಂತಿಮವಾಗಿ ಫಾಝಿಲ್ ನನ್ನು ಗುರಿಯಾಗಿಸಿದ್ದಾರೆ. 27 ನೇ ತಾರೀಕಿಗೆ ಸುಹಾಸ್ ಶೆಟ್ಟಿ ಸುರತ್ಕಲ್ ಹೋಟೆಲ್ ಗೆ ಹೋಗಿ ಗಿರಿಧರ್ ನನ್ನು ಅಲ್ಲಿಗೆ ಕರಿಸಿಕೊಳ್ಳುತ್ತಾರೆ. ಕಾರ್ ಬೇಕು ವೆಪನ್ ನನ್ನ ಬಳಿ ಇದೆ ಸ್ವಲ್ಪ ಹುಡುಗರು ಬೇಕು ಅಂತ ಚರ್ಚೆ ಮಾಡ್ತಾರೆ.ಅಲ್ಲಿಗೆ ಮೋಹನ್ ಕೂಡ ಇವರ ಜೊತೆ ಸೇರಿಕೊಳ್ಳುತ್ತಾನೆ. ನಂತರ ಮೋಹನ್ ತನ್ನ ಪರಿಚಯದ ಅಜಿತ್ ಕ್ರಾಸ್ತಾ ಬಳಿ ಗಿರಿಧರ್ ಜೊತೆ ಬಂದು ಕಾರ್ ಪಡೆಯುತ್ತಾರೆ. ಈ ವೇಳೆ ಹೋಟೆಲೊಂದರಲ್ಲಿ ಚರ್ಚೆ ನಡೆಸಿದ್ದು ಆರೋಪಿ ಮೋಹನ್ ತನ್ನ ಮತ್ತಿಬ್ಬರು ಸ್ನೇಹಿತರಿಗೆ ಯೋಜನೆಗೆ ಸೇರಲು ಕರೆ ಮಾಡಿ ಆಹ್ವಾನ ನೀಡಿದ್ದಾನೆ.

ಕಾರಿಗೆ ಬಾಡಿಗೆ ನಿಗದಿ: ಆರೋಪಿ ಮೋಹನ್ ಜು.27 ರಂದು ತಮ್ಮ ಪರಿಚಯಸ್ಥ ಅಜಿತ್ ಕ್ರಾಸ್ತಾ ಎಂಬಾತನ ಬಳಿ, “ಮಹತ್ವದ ಕೆಲಸವೊಂದಿದೆ” ಎಂದು 15000 ರೂ ಬಾಡಿಗೆ ನಿಗದಿ ಮಾಡಿ ಒಂದು ಸಾವಿರ ಅಡ್ವಾನ್ಸ್ ನೀಡಿ ಕಾರು ಪಡೆದು ಕೃತ್ಯಕ್ಕೆ ಬಳಸಿಕೊಂಡಿದ್ದಾರೆ. ಹೀಗಾಗಿ ಅಜಿತ್ ಕ್ರಾಸ್ತಾಗೂ ಘಟನೆಯ ಬಗ್ಗೆ ಅಸ್ಪಷ್ಟವಾದ ಮಾಹಿತಿ ಇತ್ತು.

ಹತ್ಯೆಗೂ ಮುನ್ನ ದೇವಾಲಯ ಭೇಟಿ :ಜು.27 ರಂದು ಸುಹಾಸ್ ಶೆಟ್ಟಿ ಕಾವೂರಿನಲ್ಲಿ ಸ್ನೇಹಿತರ ಮನೆಯಲ್ಲಿ ತಂಗಿದ್ದು, ಜುಲೈ 28 ರಂದು ಮುಂಜಾನೆ ಕಾರಿನಲ್ಲಿ ಕಾರಿಂಜೇಶ್ವರ ದೇವಸ್ಥಾನಕ್ಕೆ ತೆರಳಿದ್ದಾನೆ. ಬಳಿಕ ಸುಹಾಸ್ ಶೆಟ್ಟಿ ಸೇರಿದಂತೆ ಪ್ರಕರಣದ ಇತರ ಕೆಲವು ಆರೋಪಿಗಳ ಕೋರ್ಟ್ ಇರುವ ಕಾರಣ ಕೋರ್ಟ್ ಗೆ ಬರುತ್ತಾರೆ. ಕೋರ್ಟ್ ಗೆ ಹಾಜರಾದ ಬಳಿಕ ಸುಹಾಸ್ ಶೆಟ್ಟಿ ,ಅಭಿಷೇಕ್ , ಶ್ರೀನಿವಾಸ್ ಚರ್ಚೆ ನಡೆಸಿ ಟಾರ್ಗೆಟ್ ಗುರುತಿಸಿ ಮಂಕಿ ಕ್ಯಾಪ್ ಬೇಕು ಎಂದು ಮಂಕಿ ಕ್ಯಾಪ್ ಅರೇಂಜ್ ಮಾಡ್ತಾರೆ. ಬಳಿಕ ಎಲ್ಲರೂ ಕಿನ್ನಿಗೋಳಿ ಬಳಿಯ ಬಾರಿನಲ್ಲಿ ಊಟ ಮಾಡಿ ಫಾಸಿಲ್ ಹತ್ಯೆಗೆ ಹೊರಡುತ್ತಾರೆ.

ಯೋಜಿತ ಸಂಚು:ಫಾಝಿಲ್ ಹತ್ಯೆಯಲ್ಲಿ ಪ್ರೀತಿ – ಪ್ರೇಮ, ಆಂತರಿಕ ಘರ್ಷಣೆ, ರಾಂಗ್ ಟಾರ್ಗೆಟ್ ಎಂಬಿತ್ಯಾದಿ ವಿಚಾರವಾಗಿ ಗಾಳಿ ಸುದ್ದಿ ಹಬ್ಬಿದ್ದು, ಇದೆಲ್ಲವನ್ನೂ ತಳ್ಳಿ ಹಾಕಿದ ಪೊಲೀಸ್ ಆಯುಕ್ತರು,
ಹಂತಕರ ಅಂತಿಮ ಟಾರ್ಗೆಟ್ ಫಾಝಿಲ್ ಆಗಿದ್ದು, ಆತನ ಚಲನವಲನಗಳ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.ಸುರತ್ಕಲ್ ನಲ್ಲಿ ಸಂಜೆಗತ್ತಲು ಆವರಿಸುತ್ತಿದ್ದಂತೆ ಚಲನವಲವನ್ನು ಫಾಲೋ ಮಾಡಿ ಹಂತಕರು ಏಕಾಏಕಿ ಮುಗಿಬಿದ್ದಿದ್ದಾರೆ. ಸುಹಾಸ್, ಮೋಹನ್, ಅಭಿಷೇಕ್ ಹಲ್ಲೆ ಮಾಡಿದ್ದು, ಈ ಪೈಕಿ ಗಿರಿಧರ್ ಡೈವಿಂಗ್ ಸೀಟಿನಲ್ಲಿದ್ದ. ದೀಕ್ಷಿತ್ ಕಾರಿನಲ್ಲಿದ್ದ.ಶ್ರೀನಿವಾಸ್ ಕವರಿಂಗ್ ಮಾಡುತ್ತಿದ್ದ.ಹತ್ಯೆಯ ನಂತರ 6 ಆರೋಪಿಗಳು ಪಲಿಮಾರು ಕಡೆಗೆ ಪರಾರಿಯಾಗಿದ್ದಾರೆ.ಬಳಿಕ ಕಾರನ್ನು ಕಾರ್ಕಳದ ಇನ್ನಾ ಗ್ರಾಮದಲ್ಲಿ ಬಿಟ್ಟು ಅಲ್ಲಿಂದ ಶ್ರೀನಿವಾಸ್ ತನ್ನ ಸ್ನೇಹಿತನಿಗೆ ಕರೆ ಮಾಡಿ ಬೇರೆ ಕಾರ್ ತರಿಸಿ ಅಲ್ಲಿಂದ ಬೇರೆ ಬೇರೆ ಕಡೆ ಚಲಿಸಲು ಯತ್ನಿಸಿದರು ಅದು ವಿಫಲವಾಗುತ್ತದೆ.ಬಳಿಕ ಇಂದು ಬೆಳಿಗ್ಗೆ ಇನ್ನರ್ ರೋಡ್ ಬಳಸಿ ಮೂಡುಬಿದ್ರೆ ಕಾರ್ಕಳ ರಸ್ತೆ ಮೂಲಕ ಉದ್ಯಾವರ ಬಳಿ ತಲುಪಿದಾಗ ಬೆಳಗ್ಗೆ 5.30 ಗೆ ಸಿಸಿಬಿ ಹಾಗೂ ನಾರ್ತ್ ಎಸಿಪಿ ಅವರ ತಂಡಕ್ಕೆ ಸಿಕ್ಕಿ ಬಿದ್ದಿದ್ದಾರೆ.

14 ದಿನಗಳ ಕಸ್ಟಡಿಗೆ ಕೋರಿದ ಪೊಲೀಸರು:ಫಾಝಿಲ್‌ನನ್ನು ಹತ್ಯೆಗೈದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 14 ದಿನಗಳ ಪೊಲೀಸ್ ಕಸ್ಟಡಿಗೆ ಕೋರಲಾಗಿದೆ. ಮುಂದೆ ಪೊಲೀಸ್ ಕಸ್ಟಡಿಗೆ ದೊರೆತ ಬಳಿಕ ಆರೋಪಿಗಳ ವಿಚಾರಣೆಯ ನಂತರ ಫಾಝಿಲ್‌ನನ್ನು ಏಕೆ ಟಾರ್ಗೆಟ್ ಮಾಡಲಾಗಿದೆ ಆರೋಪಿಗಳು ಯಾರ ಜೊತೆ ಮತ್ತು ಯಾವ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು ಎಂಬುದು ತಿಳಿದು ಬರಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ವಿಡಿಯೋ ನೋಡಿ

Advertisement
Previous Post

ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ವಿಟ್ಲದ ಲಿಲ್ಲಿ ಪಾಯಸ್ ಆಯ್ಕೆ.!

Next Post

ವಿಟ್ಲ: ಕೇಪು ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆಗೆ ಶರಣು..!!!

OtherNews

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!
ಕ್ರೈಮ್

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ
ಪುತ್ತೂರು

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!
ಕ್ರೈಮ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!
ಪುತ್ತೂರು

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!
ಕ್ರೈಮ್

ಬೆಳ್ಳಂಬೆಳಗ್ಗೆ ಭೀಕರ ಸರಣಿ ಅಪಘಾತ : 7 ಜನ ಸ್ಥಳದಲ್ಲೇ ದುರ್ಮರಣ..!!

February 13, 2026
ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!
Featured

ಟಿಪ್ಪರ್ ಲಾರಿ ಮತ್ತು ಪಿಕ್‌ಅಪ್ ವಾಹನದಲ್ಲಿ ಶಾಲಾ ಮಕ್ಕಳ ಟ್ರಿಪ್ : ಪ್ರಕರಣ ದಾಖಲು..!!

February 13, 2026

Leave a Reply Cancel reply

Your email address will not be published. Required fields are marked *

Recent News

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

ಟ್ರಯಾಂಗಲ್ ಲವ್ ಕೇಸ್.. ನಡುರಸ್ತೆಯಲ್ಲೇ 19 ವರ್ಷದ ಯುವತಿ ಗುಂಡೇಟಿಗೆ ಬಲಿ..!

February 13, 2026
ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

ಪುತ್ತೂರಿನ ಮನ್ವಿತ್ ಕುಮಾರ್‌ಗೆ ರಾಷ್ಟ್ರಮಟ್ಟದ ಗೌರವ

February 13, 2026
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಮಾರಾಟಕ್ಕೆ ಯತ್ನಿಸಿದ ಮೂವರ ಬಂಧನ..!!

February 13, 2026
ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್ಚೇಂಜ್ ಮೇಳ’..!!

February 13, 2026
Zoomin Tv

Zoomin Tv is an upcoming News - Entertainment channel from coastal area. Here, news & events from different parts of the state and from different categories like politics, sports, agriculture, crime, and many more will be covered. With a motto to help the readers in getting fresh news/video updates in time, Zoomin Tv has come up with a Kannada news website.

Browse by Category

  • Featured
  • VIRAL
  • ಅಂಕಣ
  • ಅಂತಾರಾಷ್ಟ್ರೀಯ
  • ಆರೋಗ್ಯ
  • ಆವಿಷ್ಕಾರ
  • ಉದ್ಘಾಟನೆ
  • ಕರಾವಳಿ
  • ಕೃಷಿ
  • ಕ್ರೀಡೆ
  • ಕ್ರೈಮ್
  • ದಿನ ಭವಿಷ್ಯ
  • ಧಾರ್ಮಿಕ
  • ನಿಧನ
  • ನ್ಯೂಸ್
  • ಪುತ್ತೂರು
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಮಂಗಳೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಾಣಿಜ್ಯ
  • ಶಿಕ್ಷಣ
  • ಶುಭವಿವಾಹ :
  • ಸಿನಿಮಾ
  • ಸುಳ್ಯ

Contact for News/Advertisements

2nd Floor, Shree Krishna Complex,
Behind Kanavu Skin Clinic, Main Road, Puttur.

+91 7892570932 | +91 7411060987

Email: zoominputtur@gmail.com

Follow Us

  • Terms & Conditions

© 2020 Zoomin TV. All Rights Reserved. Website made with ❤️ by The Web People.

No Result
View All Result

© 2020 Zoomin TV. All Rights Reserved. Website made with ❤️ by The Web People.

You cannot copy content of this page