ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ರವರಿಗೆ ಶ್ರದ್ಧಾಂಜಲಿ ಸಭೆಯು ಪಂಚಲಿಂಗೇಶ್ವರ ಸಭಾ ಭವನದಲ್ಲಿ ನಡೆಯಿತು.

ಪ್ರವೀಣ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು.

ಹಿಂದೂ ಜಾಗರಣ ವೇದಿಕೆ ದಕ್ಷಿಣ ಪ್ರಾಂತ ಯುವ ವಾಹಿನಿ ಸಹಪ್ರಮುಖ್ ಚಿನ್ಮಯ್ ಈಶ್ವರಮಂಗಲ, ಹಿರಿಯರಾದ ಪೂರ್ಣತ್ಮ ರಾಮ್ ಈಶ್ವರಮಂಗಲ, ರಾಜೇಂದ್ರ ಪ್ರಸಾದ್ ರೈ ಮೇನಾಲ,ದೀಪಕ್ ಮುಂಡ್ಯ ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಅಧ್ಯಾಪಕರಾದ ರಾಮಣ್ಣ ರೈ , ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹ ಸಂಯೋಜಕ ರಾಜೇಶ್ ಪಂಚೋಡಿ,ತಾಲೂಕ್ ಸಂಪರ್ಕ ಪ್ರಮುಖ ಪ್ರಜ್ವಲ್ , ಸತೀಶ್ ಸುರುಲಿಮೂಳೆ,ಚಂದ್ರಹಾಸ , ಗೌರೀಶ್, ಹರೀಶ್ ಬಾಬು,ಚಂದ್ರ ಟೈಲರ್ ಸೇರಿದಂತೆ, ವಿವಿಧ ಸಂಘಟನೆ ಮತ್ತು ಪರಿವಾರದ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು. ಸಂಘ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.


























