ಪುತ್ತೂರು: ಹೆಸರಾಂತ ಮುಳಿಯ ಜ್ಯುವೆಲ್ಸ್ ಸಂಸ್ಥೆ ವತಿಯಿಂದ ಸಾಮಾಜಿಕ ಕಾಳಜಿಯ ಭಾಗವಾಗಿ ಮೊನ್ನೆ ಸುಬ್ರಹ್ಮಣ್ಯ ಪರಿಸರದಲ್ಲಿ ಉಂಟಾದ ನೆರೆಯ ಸಂತ್ರಸ್ತರಿಗೆ ಆಹಾರದ ಕಿಟ್ಗಳನ್ನು ವಿತರಿಸಲಾಯಿತು.

ಸುಮಾರು 64,000 ರೂ ಗಳ ಮೌಲ್ಯದ ಒಟ್ಟು 54 ಕಿಟ್ ಗಳನ್ನು ವಿತರಿಸಲಾಯಿತು. ನೂಚಿಲ, ಹರಿಹರ, ಪಲ್ಲತಡ್ಕ, ದೇವರಗದ್ದೆ, ಸುಬ್ರಹ್ಮಣ್ಯ ಬಾಲ ಗದೆಗೇರಿ ಪ್ರದೇಶಗಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಮೋಹನ್ ಸುಳ್ಳಿ ಮತ್ತು ಮುಖಂಡರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೆರೆ ಸಂತ್ರಸ್ತರು ಮುಳಿಯ ಜ್ಯುವೆಲ್ಸ್ ನ ಸಾಮಾಜಿಕ ಕಳಕಳಿ ಹಾಗೂ ಸೇವಾ ಬದ್ಧತೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ವ್ಯಕ್ತಪಡಿಸಿದರು.


























