ಪುತ್ತೂರು: ಪತಿಯ ಉತ್ತರಕ್ರಿಯಾ ದಿನ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣಾಜೆ ಗ್ರಾಮದ ಕೊಂದಲಕಣಾದಲ್ಲಿ ನಡೆದ ಘಟನೆ ಆ.20 ರಂದು ನಡೆದಿದೆ.
ಇತ್ತೀಚೆಗೆ ನಿಧನರಾದ ಕೊಂದಲಕಾಣ ನಿವಾಸಿ ಕೃಷ್ಣ ನಾಯ್ಕ ರವರ ಉತ್ತರಕ್ರಿಯಾದಿ ಕಾರ್ಯದ ಅಂಗವಾಗಿ ಉಪ್ಪಿನಂಗಡಿಯಲ್ಲಿ ಕಾರ್ಯ ನಡೆಯುವ ಸಂದರ್ಭ ಮನೆಯಲ್ಲಿದ್ದ ಕೃಷ್ಣ ನಾಯ್ಕ ರವರ ಪತ್ನಿ ವಸಂತಿ (42) ರವರು ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
























