ಬೆಳ್ತಂಗಡಿ: ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕರಾಯ ಮುರಿಯಾಳ ನಿವಾಸಿ ಅಬೂಬಕ್ಕರ್ ಎಂಬವರ ಪುತ್ರ, ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನ ಎರಡನೇ ವರ್ಷದ ಪದವಿ ವಿದ್ಯಾರ್ಥಿ ಶಫೀಕ್ ಎಂದು ಗುರುತಿಸಲಾಗಿದೆ.

ಶಫೀಕ್ ಮಂಗಳೂರಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮತ್ತೊಂದು ಬೈಕ್ ನಲ್ಲಿದ್ದವರು ಕೂಡ ಗಂಭೀರ ಗಾಯಗೊಂಡಿದ್ದು, ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿರಿಸಲಾಗಿದೆ. ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

























