ಪುತ್ತೂರು: ಇಬ್ಬರು ಹೆಣ್ಣು ಮಕ್ಕಳೊಂದಿಗೆ ಸುಮಾರು ವರುಷಗಳಿಂದ ಮನೆಯಿಲ್ಲದೆ ಸಂಕಷ್ಟ ಪಡುತ್ತಿರುವ ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು ‘ಅಭಿನವ ಭಾರತ ಮಿತ್ರಮಂಡಳಿ’ಯವರು ಮುಂದಾಗಿದ್ದು, ಈ ಹಿನ್ನೆಲೆ ಇಂದು ನೂತನ ಮನೆಗೆ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು.

ಶ್ರೀಕೃಷ್ಣ ಉಪಾಧ್ಯಾಯ ರವರು ಗುದ್ದಲಿ ಪೂಜೆಯ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಿಕೊಟ್ಟರು.ಪಿಜಿ ಜಗನ್ನಿವಾಸ್ ರಾವ್ ಮಾರ್ಕಿಂಗ್ ಕಾರ್ಯವನ್ನು ನೆರವೇರಿಸಿ ಕೊಟ್ಟರು. ಈ ವೇಳೆ ಶರತ್ ಮಾಡವು ರವರು 5000 ರೂ. ಸಹಾಯಧನದ ಚೆಕ್ ಅನ್ನು ಸುಮಾವತಿಯವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ದಿನೇಶ್ ಜೈನ್, ಧನ್ಯಕುಮಾರ್ ಬೆಳಂದೂರು, ಪಿಜಿ ಜಗನ್ನಿವಾಸ್ ರಾವ್, ವಿಶ್ವ ಹಿಂದೂ ಪರಿಷದ್ ಕೆಯ್ಯೂರ್ ನ ಅಧ್ಯಕ್ಷರಾದ ಚರಣ್, ಪಂಚಾಯತ್ ಸದಸ್ಯರಾದ ಮೀನಾಕ್ಷಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಕೆಯ್ಯೂರು ಮಾಡಾವು ಪತ್ಯರ್ಡ್ಕ ನಿವಾಸಿ ದಿ. ವಸಂತ ಎಂಬವರ ಪತ್ನಿ ಸುಮಾವತಿ (38) ಎಂಬವರು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಗಡು ಶೀಟ್ ಹಾಕಿದ ಪ್ಲಾಸ್ಟಿಕ್ ಹೊದಿಕೆಯಿಂದ ಮುಚ್ಚಿರುವ ಸಣ್ಣ ಜೋಪಡಿಯಲ್ಲಿ ವಾಸವಾಗಿದ್ದು, ಮನೆಯಿಲ್ಲದೆ ತೀರಾ ಸಂಕಷ್ಟ ಪಡುವಂತಾಗಿದೆ. ಈ ಬಗ್ಗೆ ವರದಿ ಪ್ರಕಟಿಸಿದ ಬೆನ್ನಲ್ಲೇ ‘ಅಭಿನವ ಭಾರತ ಮಿತ್ರಮಂಡಳಿ’ಯವರು ಮಹಿಳೆಗೆ ಮನೆ ನಿರ್ಮಾಣ ಮಾಡಿ ಕೊಡಲು ಮುಂದಾಗಿದ್ದು, ಶಾಸಕ ಸಂಜೀವ ಮಠoದೂರು ಮುಖಾಂತರ ಸರ್ಕಾರದಿಂದ ಬರುವ ಅನುದಾನ ಬಳಸಿ ಮನೆ ಕಟ್ಟಿ ಕೊಡುವ ಭರವಸೆಯನ್ನು ನೀಡಿದ್ದಾರೆ.





























