ಅರಂತೋಡು: ತೊಡಿಕಾನ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತಪಟ್ಟ ಫಾರೆಸ್ಟ್ ವಾಚರ್ ಅನ್ನು ಚಿನ್ನಪ್ಪ (58 ) ಎಂದು ಗುರುತಿಸಲಾಗಿದೆ.

ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಮೊಟ್ಟೆ ಎಂಬಲ್ಲಿ ಹೊಳೆ ಬದಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.