ಪುತ್ತೂರು: ಅಸ್ವಸ್ಥಗೊಂಡಿದ್ದ ಅಪರಿಚಿತ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ.
ನ.8 ರಂದು ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ
ತೀರಾ ಅಸ್ವಸ್ಥಗೊಂಡು ಸಂಟ್ಯಾರು ಬಸ್ ತಂಗುದಾಣದಲ್ಲಿ ಮಲಗಿದ್ದರು. ಅದೇ ದಾರಿಯಾಗಿ ಬರುತ್ತಿದ್ದ ಆರ್ಯಾಪು ನಿವಾಸಿ ಹರೀಶ್ ನಾಯಕ್ ಅವರು ಅಸ್ವಸ್ಥಗೊಂಡ ವ್ಯಕ್ತಿಯ ವಿಳಾಸ ಕೇಳುವ ಪ್ರಯತ್ನ ಮಾಡಿದರೂ ಆ ವ್ಯಕ್ತಿ ಯಾವುದೇ ಉತ್ತರ ನೀಡುವ ಸ್ಥಿತಿಯಲ್ಲಿಲ್ಲದ ಹಿನ್ನಲೆಯಲ್ಲಿ ತಕ್ಷಣ ಆ್ಯಂಬುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕಳುಹಿಸಿದರು. ಪುತ್ತೂರು ಆಸ್ಪತ್ರೆಯಿಂದ ಆ ವ್ಯಕ್ತಿಯನ್ನು ಮಂಗಳೂರು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನ.9 ರಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರ ಗುರುತು ಪರಿಚಯಕ್ಕಾಗಿ ಸಂಪ್ಯ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
