ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನ.23 ರಂದು ಲಕ್ಷದೀಪೋತ್ಸವ ಉತ್ಸವ ಜರುಗಲಿದ್ದು, ದೇವಳದ ರಥ ಬೀದಿಯುದ್ದಕ್ಕೂ ರಂಗೋಲಿ ಹಾಕುವ ಮತ್ತು ಹಣತೆಯನ್ನು ಬೆಳಗಿಸುವ ನಿಟ್ಟಿನಲ್ಲಿ ರಥ ಬೀದಿಯಲ್ಲಿ ಬೆಳಗ್ಗಿನಿಂದಲೇ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ರಥ ಬೀದಿಯ ಉದ್ದಕ್ಕೂ ಬೆಳಗ್ಗಿನಿಂದಲೇ ರಂಗೋಲಿ ಹಾಕುವ ಕಾರ್ಯಕ್ರಮ ನಡೆಯಲಿದೆ. ಇದರ ಜೊತೆಗೆ ರಾತ್ರಿ ಹಣತೆ ಬೆಳಗಿಸುವ ನಿಟ್ಟಿನಲ್ಲಿ ಬೆಳಗ್ಗಿನಿಂದಲೇ ಹಣತೆ ಜೋಡಣಾ ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ವಾಹನ ಸಂಚಾರದಿಂದ ತೊಂದರೆ ಆಗುವ ನಿಟ್ಟಿನಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆಯಾಗಿ ಶ್ರೀ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಮತ್ತು ಮಡಿವಾಳಕಟ್ಟೆ ಸ್ಮಶಾನದ ಎದುರಿನಿಂದ ಗದ್ದಗೆ ಬರಲು ಅವಕಾಶ ನೀಡಲಾಗಿದೆ. ಇದರೊಂದಿಗೆ ದೇವಳದ ಎದುರಿನ ರಸ್ತೆಯನ್ನು ಮಧ್ಯಾಹ್ನ ಗಂಟೆ 2 ರಿಂದ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು. ಭಕ್ತರು ಸಹಕರಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..