ಮಂಗಳೂರು: ಕೃಷ್ಣಾಪುರದ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಾಟಿಪಳ್ಳ 4ನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ (28) ಎಂದು ಗುರುತಿಸಲಾಗಿದೆ.

ಕಳೆದ ಶನಿವಾರ ರಾತ್ರಿ ಕೃಷ್ಣಾಪುರ 9ನೇ ಬ್ಲಾಕ್ ನಿವಾಸಿ ಜಲೀಲ್ ರನ್ನು ಕಾಟಿಪಳ್ಳ 4ನೇ ಬ್ಲಾಕ್ನ ನೈತಂಗಡಿ ಎಂಬಲ್ಲಿರುವ ಅವರ ಫ್ಯಾನ್ಸಿ ಮತ್ತು ಚಪ್ಪಲಿಯ ಅಂಗಡಿಯ ಮುಂಭಾಗ ಚೂರಿಯಿಂದ ಇರಿದು ಹತ್ಯೆ ಮಾಡಲಾಗಿತ್ತು..
























