ಬೆಂಗಳೂರು: ಭರತನಾಟ್ಯ ನೃತ್ಯಗಾರ್ತಿ ಲಾಲಿತ್ಯ ಕುಮಾರ್ ಬೇಲೂರು ರವರಿಗೆ ‘ವಿಶ್ವ ಮಾನವ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ಸಾಂಸ್ಕೃತಿಕ ಸಮ್ಮೇಳನದಲ್ಲಿ, ವಿಶ್ವ ಕನ್ನಡ ಕ್ರಾಂತಿ ಸೇನೆ ವತಿಯಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಲಾಲಿತ್ಯ ರವರು ಭರತನಾಟ್ಯ ನೃತ್ಯಗಾರ್ತಿಯಾಗಿದ್ದು, ಹಲವಾರು ಕಡೆಗಳಲ್ಲಿ ನಾಟ್ಯ ಪ್ರದರ್ಶನ ನೀಡಿ, ಹಲವು ಪ್ರಶಸ್ತಿ, ಸನ್ಮಾನಗಳಿಗೆ ಭಾಜನರಾಗಿದ್ದಾರೆ.
