ಬಂಟ್ವಾಳ: ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯ ಪಳಿಕೆ ಎಂಬಲ್ಲಿ ನಡೆದಿದೆ.
ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ಕಾರು, ಎದುರಿನಿಂದ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದು ಬಳಿಕ ಅದರ ಹಿಂದಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ಎರಡು ಕಾರು ಮತ್ತು ಆಟೋ ರಿಕ್ಷಾದಲ್ಲಿ ಬೆಂಗಳೂರು, ಬಿಸಿ.ರೋಡ್ ಮೂಲದ ಪ್ರಯಾಣಿಕರಿದ್ದು, ಆಟೋ ಚಾಲಕ ಬುಡೋಳಿ ನಿವಾಸಿ ಎಂದು ತಿಳಿದು ಬಂದಿದೆ..