ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ರಿ. ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಕಾರ್ಯಕ್ರಮದಡಿಯಲ್ಲಿ ರಾಷ್ಟ್ರೀಯ ಯುವದಿನಾಚರಣೆ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ನಡುಬೈಲು ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೈಂಟ್ ಫಿಲೋಮಿನಾ ಕಾಲೇಜು ಪುತ್ತೂರಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದಿನಕರ್ ಅಂಚನ್ ರವರು ವಿದ್ಯಾರ್ಥಿಗಳಿಗೆ ರಾ.ಸೇ.ಯೋ ಒಂದು ಅದ್ಭುತವಾದ ಶಕ್ತಿ, ಎಲ್ಲಾ ವಿದ್ಯಾರ್ಥಿಗಳು ಈ ಯೋಜನೆಯಲ್ಲಿ ಪಾಲ್ಗೊಳ್ಳಬೇಕು ಎಂದರು. ಸ್ವಾಮೀ ವಿವೇಕಾನಂದರ ಜೀವನ ಚರಿತ್ರೆ ಹಾಗೂ ಅವರ ಜೀವನದಲ್ಲಿ ನಡೆದ ಕೆಲವೊಂದು ಘಟನೆ ಹಾಗೂ ತತ್ವಗಳನ್ನು ತಿಳಿಸಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಮಾತುಗಳನ್ನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಪಕ್ಕಳ ರವರು ವಿದ್ಯಾರ್ಥಿಗಳಿಗೆ ರಾ.ಸೇ.ಯೋಜನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದು ಕಿವಿಮಾತುಗಳನ್ನು ಹೇಳಿದರು.
ಕಾಲೇಜಿನ ರಾ.ಸೇ. ಯೋಜನಾಧಿಕಾರಿ ಕಿಶೋರ್ ಕುಮಾರ್ ರೈ ಕೆ ಸ್ವಾಗತಿಸಿ, ವಿದ್ಯಾರ್ಥಿ ಹಸ್ತಿಕ್ ವಂದಿಸಿದರು. ರಾ.ಸೇ.ಯೋ. ವಿದ್ಯಾರ್ಥಿ ನಾಯಕರಾದ ಹಸ್ತಿಕ್ ಹಾಗೂ ವಿದ್ಯಾಶ್ರೀ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ತಿಲಕ್ರಾಜ್ ಕಾರ್ಯಕ್ರಮ ನಿರೂಪಿಸಿದರು.