ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಖಂಡನೀಯ ಎಂದು ಅಶೋಕ್ ಕುಮಾರ್ ರೈ ಕೋಡಿಂಬಾಡಿ ರವರು ಪ್ರತಿಕ್ರಿಯಿಸಿದ್ದಾರೆ.
ಎಲ್ಲಾ ವರ್ಗದವರಿಗೆ ಮೂಲಭೂತ ಶಿಕ್ಷಣ ನೀಡುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಸರಿಯಾದ ವ್ಯವಸ್ಥೆ, ವೇತನ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಿಯಾದ ಕಟ್ಟಡ ನಿರ್ಮಾಣ ಮಾಡಿಕೊಡಬೇಕಾಗಿರುವುದು ಸರ್ಕಾರದ ಕರ್ತವ್ಯವಾಗಿದೆ.
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ತಮಗೆ ಸರಿಯಾದ ಸಮಯದಲ್ಲಿ ವೇತನ, ಮಿನಿ ಕೇಂದ್ರವನ್ನು ಮೇಲ್ದರ್ಜೆಗೆರಿಸುವಂತೆ ಹಾಗೂ ಆರೋಗ್ಯವಿಮೆಯಾದ ಇ. ಎಸ್. ಐ ಜಾರಿ ಮಾಡಬೇಕು. ತೀವ್ರ ತರಹ ಕಾಯಿಲೆಗಳಿಂದ ಬಳಲುತ್ತಿರುವ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಂಬಳ ಸಹಿತ ರಜೆ ನೀಡುವಂತೆ ಹಾಗೂ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರು ಪ್ರತಿಭಟನೆ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರಿಯಾದ ರೀತಿಯಲ್ಲಿ ಸ್ಪಂದಿಸದೆ. ಅವರನ್ನು ಏಕಾಏಕಿಯಾಗಿ ಪೊಲೀಸರು ವಶಕ್ಕೆ ಪಡೆದಿರುವುದು ಖಂಡನೀಯ.
ಪ್ರತಿಭಟನೆಯಲ್ಲಿರುವವರನ್ನು ಏಕಾಏಕಿ ಪೊಲೀಸರಿಂದ ವಶಕ್ಕೆ ಪಡೆಸುವುದು ಸರಿಯಾದ ವರ್ತನೆಯಲ್ಲ. ಸರಕಾರ ಈ ರೀತಿಯಾದ ಅಮಾನವೀಯ ವರ್ತನೆಯನ್ನು ತೋರದೆ. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸಿಬೇಕು ಎಂದು ಅವರು ಪ್ರತಿಕ್ರಿಯಿಸಿದ್ದಾರೆ..

























