ರಾಜ್ಯ ಪೊಲೀಸ್ ಇಲಾಖೆಯಲ್ಲಿ ವರ್ಗಾವಣಾ ಪರ್ವ ಆರಂಭಗೊಂಡಿದೆ.
ದಕ್ಷಿಣ ಕನ್ನಡ, ಬೀದರ್, ಹುಬ್ಬಳ್ಳಿ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಇಲಾಖೆಯ ಪ್ರಮುಖ ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ.
ದಕ್ಷಿಣ ಕನ್ನಡ ಎಸ್.ಪಿ ಸೋನಾವಣೆ ರಿಷಿಕೇಶ್ ಭಗವಾನ್, ಬೀದರ್ ಎಸ್.ಪಿ ಕಿಶೋರ್ ಬಾಬು, ಹುಬ್ಬಳ್ಳಿ ಎಸ್.ಪಿ ಚೆನ್ನಬಸವ ರವರು ವರ್ಗಾವಣೆಯಾಗಿದ್ದಾರೆ.
ದಕ್ಷಿಣ ಕನ್ನಡ ಎಸ್.ಪಿ ಸೋನಾವಣೆ ರಿಷಿಕೇಶ್ ಭಗವಾನ್ ರವರು ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ಅಮತೆ ವಿಕ್ರಮ್ ರವರು ನೇಮಕಗೊಂಡಿದ್ದಾರೆ.