ಬೆಳ್ತಂಗಡಿ: ತಾಲೂಕಿನ ಉಜಿರೆಯ ಕೆಲವು ಲಾಡ್ಜ್ ಗಳಲ್ಲಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ಫೆ.6 ರಂದು ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ಅಮಟೆ ವಿಕ್ರಮ್ ಮಾರ್ಗದರ್ಶನದಲ್ಲಿ
ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ ಅವರ ನೇತೃತ್ವದಲ್ಲಿ, ವಿಶೇಷ ತಂಡ ರಚಿಸಿ, ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡಗಳು ಏಕಕಾಲದಲ್ಲಿ ಎಲ್ಲಾ ಲಾಡ್ಜ್ ಗಳ ಮೇಲೆ ದಾಳಿ ಮಾಡಿದೆ.
ಇನ್ನು ರಿಜಿಸ್ಟರ್ ಗಳನ್ನು ಪರಿಶೀಲಿಸಿ, ಆಧಾರ್ ಕಾರ್ಡ್ ಇತರೆ ದಾಖಲೆಗಳನ್ನು ಪರಿಶೀಲಿಸಿ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆ ಬಗ್ಗೆ ಮಾಹಿತಿ ಪಡೆದಿದೆ. ಇನ್ನು ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಭಕ್ತರು ಪೂರ್ಣ ಮಾಹಿತಿ ಪಡೆದು ರೂಮ್ ನೀಡಬೇಕು. ಹಾಗೂ ಯಾವುದೇ ಅನೈತಿಕ ಮತ್ತು ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡಬಾರದು ಎಂದು ಸೂಕ್ತ ಎಚ್ಚರಿಕೆ ನೀಡಿ ತೆರಳಿದ್ದಾರೆ ಎಂದು ತಿಳಿದು ಬಂದಿದೆ..