ಮಂಗಳೂರು: ಕದ್ರಿ ಉದ್ಯಾನವನದ ಬಳಿ ಅನ್ಯಕೋಮಿನ ಜೋಡಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ ಧೀರಜ್, ಬಂಟ್ವಾಳದ ಅಭಿಜಿತ್ ಬಂಧಿತರು.
ಬಂಧಿತರು ಹಿಂದೂ ಸಂಘಟನೆಯ ಕಾರ್ಯಕರ್ತರು ಎಂದು ಹೇಳಲಾಗಿದ್ದು, ಆರೋಪಿಗಳು ಬುಧವಾರ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ..