ಪುತ್ತೂರು: ಬಿಜೆಪಿ ನಗರ ಮಂಡಲ ಬೂತ್ ಸಂಖ್ಯೆ 55 ಸದಸ್ಯ ಮನೀಶ್ ಕುಲಾಲ್ ಬನ್ನೂರು ರವರನ್ನು ಬೂತ್ 55 ರ ಬಿ ಎಲ್ ಎ 2 ರ ಜವಾಬ್ದಾರಿಯಿಂದ ವಜಾಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
ಪಕ್ಷ ವಿರೋಧಿ ಚಟುವಟಿಗಳನ್ನು ಗಮನಿಸಿ ಪಕ್ಷದ ತೀರ್ಮಾನದಂತೆ ಶಿಸ್ತು ಕ್ರಮದ ಅನುಸಾರವಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ ಎಂದು ನಗರ ಮಂಡಲ ಅಧ್ಯಕ್ಷ ಪಿ.ಜಿ. ಜಗನ್ನಿವಾಸ ರಾವ್ ತಿಳಿಸಿದ್ದಾರೆ.

ಮನೀಶ್ ಬನ್ನೂರು ಭಾರತೀಯ ಜನತಾ ಪಾರ್ಟಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದು, ಪಕ್ಷ ಹಾಗೂ ಸಂಘಟನೆಗಳ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದರು ಮತ್ತು ಪಕ್ಷದ ಸಂಘಟನೆಗಳ ಎಲ್ಲಾ ಕಾರ್ಯಕ್ರಮಗಳಲ್ಲಿ ಹಲವು ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು.
ಪಕ್ಷ ಹಾಗೂ ಸಂಘಟನೆಯಲ್ಲಿ ಬಹಳ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.
ಕೆಲ ದಿನಗಳ ಹಿಂದೆ ಅಮಿತ್ ಶಾ ಬರುವ ವಿಚಾರವಾಗಿ ನಡೆದ ಜಾಥಾದಲ್ಲಿ ಶಾಸಕರು ಹೇಳಿದ ಅಣಬೆ ಹೇಳಿಕೆಯ ವಿಚಾರವನ್ನು ಮನೀಶ್ ಹಾಗೂ ಸಂಗಡಿಗರು ಪ್ರಶ್ನಿಸಿದ್ದು, ಸ್ಪಷ್ಟನೆ ನೀಡುವಂತೆ ಕೇಳಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಪಕ್ಷದ ಓರ್ವ ನಿಷ್ಠಾವಂತ ಕಾರ್ಯಕರ್ತನನ್ನು ಏಕಾಏಕಿಯಾಗಿ ಬಿ ಎಲ್ ಎ 2 ಜವಾಬ್ದಾರಿಯಿಂದ ವಜಾಗೊಳಿಸಿರುವುದು ಕೆಲ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ವಿಚಾರ ಮುಂದೆ ಯಾವ ತಿರುವು ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ..
























