ಪುತ್ತೂರು: ಹಿಂದೂ ಸಂಘಟನೆಯ ಹಲವು ಮುಖಂಡರ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಜಗನ್ನಿವಾಸ್ ರಾವ್ ರವರು ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ಮಾತುಕತೆ ನಡೆಸಿದರು.

ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಂಧಿಸದಂತೆ ಹಾಗೂ ಕಾರ್ಯಕರ್ತರಿಗೆ ತೊಂದರೆಯಾಗದಂತೆ ವಿಚಾರವನ್ನು ಪರಿಹರಿಸುವಂತೆ ಪೊಲೀಸ್ ಅಧೀಕ್ಷಕರರಲ್ಲಿ ಜಗನ್ನಿವಾಸ್ ರಾವ್ ರವರು ಮನವಿ ಮಾಡಿದರು ಎಂದು ತಿಳಿದು ಬಂದಿದೆ.
ಕೇವಲ ಹಿಂದೂ ಸಂಘಟನೆ ಕಾರ್ಯಕರ್ತರು ಮಾತ್ರವಲ್ಲದೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇತರ ಸಂಘಟನೆಗಳವರ ವಿರುದ್ಧವೂ ಸಾರ್ವಜನಿಕ ಶಾಂತಿ ಭಂಗ ಪ್ರಕರಣ ದಾಖಲು ಮಾಡಲಾಗಿದೆ ಎಂದು ಡಿವೈಎಸ್ಪಿಯವರು ತಿಳಿಸಿರುವುದಾಗಿ ಜಗನ್ನಿವಾಸ್ ರಾವ್ ರವರು ಮಾಹಿತಿ ನೀಡಿದ್ದಾರೆ..



























