ಮಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್ ಆರ್ ರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.
ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.
ಚುನಾವಣಾ ಹೊತ್ತಿನಲ್ಲೇ ಆರ್ ಪದ್ಮರಾಜ್ ರನ್ನು ಪಕ್ಷ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.


























