ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಪಲ್ಟಿಯಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ರೆಖ್ಯ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಸಿಕೊಂಡು ತೆರಳುತ್ತಿದ್ದ ಟ್ಯಾಂಕರ್ ರೆಖ್ಯ ಸಮೀಪದ ತಿರುವಿನಲ್ಲಿ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದಿದೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿದ್ದಾರೆ.
ಪರ್ಯಾಯವಾಗಿ ಗುಂಡ್ಯ ಹಾಗೂ ಇಚಿಲಂಪಾಡಿ, ಮರ್ಧಾಳ, ಉಪ್ಪಿನಂಗಡಿ ಮಾರ್ಗಗಳನ್ನು ಗುರುತಿಸಲಾಗಿದೆ.ಲಾಕ್ ಡೌನ್ ಕಾರಣದಿಂದಾಗಿ ವಾಹನ ಸಂಚಾರದಲ್ಲಿ ವಿರಳವಾಗಿದ್ದು ಭಾರೀ ಅನಾಹುತ ತಪ್ಪಿದಂತಾಗಿದೆ.