ಸುಳ್ಯ : ಕಾರು ಮತ್ತು ಸ್ಕೂಟಿ ಮಧ್ಯೆ ಅಪಘಾತ ನಡೆದು ಸ್ಕೂಟಿ ಸವಾರ ಮೃತಪಟ್ಟಿರುವ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮೃತ ಸ್ಕೂಟಿ ಸವಾರನನ್ನು ಮುತ್ತೂಟ್ ಫೈನಾನ್ಸ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನವೀನ್ ಸಂಕೇಶ ಎಂದು ಗುರುತಿಸಲಾಗಿದೆ.

ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಸ್ಕೂಟಿ ಸವಾರ ನವೀನ್ ಸಂಕೇಶ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.




























