ಪುತ್ತೂರು : ಭೂದಾಖಲೆ ಸಹಿತ ಹಲವಾರು ವಿಚಾರಗಳಿಗೆ ನಿರಾಪೇಕ್ಷಣಾ ಪತ್ರದ ನಕಲಿ ದಾಖಲೆ ಸೃಷ್ಠಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಪಡೀಲ್ ನಲ್ಲಿರುವ ಕಚೇರಿಯೊಂದಕ್ಕೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಡೆದಿದೆ.

ಗ್ರಾಮ ಪಂಚಾಯತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ವಿಶ್ವನಾಥ್ ಎಂಬವರಿಗೆ ಸೇರಿದ ಬಿ ಬಿ ಇಲೆಕ್ಟಿಕಲ್ಸ್ ಮತ್ತು ಪ್ಲಂಬಿಂಗ್ ವರ್ಕ್ ಕಚೇರಿಗೆ ತಾ.ಪಂ ಕಾರ್ಯಾನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪುತ್ತೂರು ಮತ್ತು ಕಡಬ ಎಲ್ಲಾ ಗ್ರಾ.ಪಂ ಮೊಹರು ಮತ್ತು ಬಂಟ್ವಾಳ ತಾಲೂಕಿನ ಮೂರು ಗ್ರಾ.ಪಂ ಗಳ ಪಿಡಿಒ ಸೀಲ್, ನಗರ ಸಭೆಯ ಅಧಿಕಾರಿಗಳ ಮೊಹರು ಅನ್ನು ವಶಪಡಿಸಿಕೊಂಡಿದ್ದಾರೆ.

ವಿಶ್ವನಾಥ್ ರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.


























