ಪುತ್ತೂರು : ಬಪ್ಪಳಿಕೆ ಎಂಬಲ್ಲಿ ಪತ್ರಕರ್ತ ನಿಶಾಂತ್ ಬಿಲ್ಲಂಪದವು ಎಂಬವರ ಮೊಬೈಲ್ ಅನ್ನು ಒಡೆದು ಹಾಕಿರುವ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕಲಂ 427 ಐಪಿಸಿ ರನ್ವಯ ದಾಖಲಿಸಿಕೊಂಡು ಸದ್ರಿ ದೂರಿನಲ್ಲಿ ಸಲ್ಲಿಸಿರುವ ವಿಚಾರಗಳ ಕುರಿತು ಸೂಕ್ತ ಕಾನೂನು ಮತ್ತು ನಿಯಮಗಳ ಅನ್ವಯ ಕ್ರಮ ಕೈಗೊಳ್ಳಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲು ನ್ಯಾಯಾಲಯದಲ್ಲಿ ವರದಿ ಸಲ್ಲಿಸಲು ಕ್ರಮ ಕೈಗೊಳ್ಳಲಾಗಿದೆ.
























