ಪುತ್ತೂರು : ಸಾರ್ವಜನಿಕರಿಂದ ಹಣ ಠೇವಣಿಯಾಗಿ ಸಂಗ್ರಹಿಸಿ ಹಾಗೂ ಸಿಬ್ಬಂದಿಗಳಿಗೆ ಕೂಡ ಗುರಿಯನ್ನು ನಿಗದಿಪಡಿಸಿ ಒತ್ತಡ ಹೇರಿ ಠೇವಣಿಗಳನ್ನು ಸಂಗ್ರಹಿಸಿ ಠೇವಣಿ ಅವಧಿ ಮುಗಿದರೂ ಠೇವಣಿ ಸಂಗ್ರಹಿಸಿದ ಹಣವನ್ನು ನಿಗದಿತ ಅವಧಿಯಲ್ಲಿ ವಾಪಾಸ್ಸು ನೀಡದೆ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಅಕ್ಷಯ್ ಕಾಂಪ್ಲೆಕ್ಸ್ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಭಾರತ್ ಒನ್ ಸೌಹಾರ್ಧ ಸಹಕಾರಿ ಸಂಘ ಮತ್ತು ಸದ್ರಿ ಸಂಸ್ಥೆಯ ಅಡಿಯಲ್ಲಿ ಕಾರ್ಯಚರಿಸುತ್ತಿದ್ದ ಟಾರ್ಗೆಟ್ 2 ಸಕ್ಸೆಸ್ಸ್ ಎಂಬ ಟ್ರೇಡಿಂಗ್ ಸಂಸ್ಥೆಯ ಅಧ್ಯಕ್ಷರಾದ ಗಿರೀಶ್ ರೈ, ಉಪಾಧ್ಯಕ್ಷರಾದ ಸುದೇಶ್ ರೈ ಅಲೆಕ್ಕಾಡಿ, ಮ್ಯಾನೇಜರ್ ಸಂದೀಪ್ ಹಾಗೂ ಇತರ ನಿರ್ದೇಶಕರುಗಳ ವಿರುದ್ಧ ಗ್ರಾಹಕ ನಾರಾಯಣ ನಾಯ್ಕ್ ನೀಡಿದ ದೂರಿನಂತೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಸ್ಥೆಯು ಸಾರ್ವಜನಿಕರಿಂದ ಹಣವನ್ನು ಠೇವಣಿಯಾಗಿ ಸಂಗ್ರಹಿಸಿ ಹಾಗೂ ತನ್ನ ಸಿಬ್ಬಂದಿಗಳಿಗೆ ಕೂಡ ಗುರಿಯನ್ನು ನಿಗದಿಪಡಿಸಿ ಒತ್ತಡ ಹೇರಿ ಠೇವಣಿಗಳನ್ನು ಸಂಗ್ರಹಿಸಿ ಸಾರ್ವಜನಿಕರಿಂದ ಹಣ ಪಡೆದು ಠೇವಣಿ ಅವಧಿ ಮುಗಿದರೂ ಠೇವಣಿ ಸಂಗ್ರಹಿಸಿದ ಹಣವನ್ನು ನಿಗದಿತ ಅವಧಿಯಲ್ಲಿ ವಾಪಾಸ್ಸು ನೀಡದೇ ನಂಬಿಕೆ ದ್ರೋಹ ಹಾಗೂ ವಂಚನೆ ಎಸಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ:75-2023 ಕಲಂ: 406,420 ಜೊತೆಗೆ 34 ಐ.ಪಿ.ಸಿ ಮತ್ತು 21,22 BANNING OF UNREGULATED DEPOSIT SCHEMES ACT 2019 ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.




























