ಉಪ್ಪಿನಂಗಡಿ : ಮಾದಕ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಬೆಳ್ತಂಗಡಿ ಇಳಂತಿಲ ನಿವಾಸಿ ಮಹಮ್ಮದ್ ಶಾಫಿ (30) ಬಂಧಿತ ಆರೋಪಿ.
ಉಪ್ಪಿನಂಗಡಿಯ ಸಿ ಎ ಬ್ಯಾಂಕ್ ಬಳಿ ಒಬ್ಬ ವ್ಯಕ್ತಿಯು ಮಾದಕ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ನಶೆಯಲ್ಲಿ ಹೀನಾಯವಾಗಿ ಮಾತನಾಡುತ್ತಾ ಅನುಚಿತವಾಗಿ ವರ್ತಿಸುತ್ತಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣಾಧಿಕಾರಿ ಹಾಗೂ ಠಾಣಾ ಸಿಬ್ಬಂದಿಗಳು ವಿಚಾರಿಸಿದಾಗ ತಾನು ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿರುತ್ತಾನೆ.
ಆತನ ಬಳಿಯಿದ್ದ ಅಂದಾಜು 5,000/-ಮೌಲ್ಯದ ಮೊಬೈಲ್ ನೊಂದಿಗೆ ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ.
ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ 104/2023 ಕಲಂ: 27 (ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ..